ಉಡುಪಿ: ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ಶ್ರೀಲಕ್ಷ್ಮೀ ಹೆಸರಿನ ಡೀಪ್ ಸೀ ಬೋಟ್ ಮಹಾರಾಷ್ಟ್ರದಲ್ಲಿ ಸೆರೆಯಾಗಿದೆ. ಬೋಟಲ್ಲಿದ್ದ ಏಳು ಮಂದಿ ಮೀನುಗಾರರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಶ್ರೀಲಕ್ಷ್ಮೀ ಬೋಟ್ ನ ಕ್ಯಾಪ್ಟನ್ ರಾಮ ಭಟ್ಕಳ ಸೇರಿ ಏಳು ಮಂದಿ ಎರಡು ದಿನಗಳ ಹಿಂದೆ ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ಬೋಟಲ್ಲಿದ್ದ ಏಳೂ ಮಂದಿ ಉತ್ತರ ಕನ್ನಡ ಜಿಲ್ಲೆಯವರು ಎಂಬ ಮಾಹಿತಿ ಇದೆ. ಗೋವಾ ರಾಜ್ಯ ದಾಟಿ ಮಹಾರಾಷ್ಟ್ರ ತಲುಪಿದ್ದ ಬೋಟ್ ಮಾಲ್ವಾನ್ ಸಮುದ್ರ ತಲುಪುತ್ತಿದ್ದಂತೆ ಅಲ್ಲಿನ ಕೋಸ್ಟ್ ಗಾರ್ಡ್ ಪೊಲೀಸರು ಬೋಟ್ ಮತ್ತು ಮೀನುಗಾರರನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಸಮುದ್ರ ತೀರದಿಂದ ಬೋಟ್ 12 ನಾಟೇಕಲ್ ದೂರ ಹೊರಗಿತ್ತು. ಆದರೂ ಮಹಾರಾಷ್ಟ್ರದ ಮಾಲ್ವಾನ್ ಕೋಸ್ಟ್ ಗಾರ್ಡ್ ಪೊಲೀಸರಿಗೆ ಅಲ್ಲಿನ ಮೀನುಗಾರರು ದೂರು ನೀಡಿದ್ದರಿಂದ ಬಂಧನವಾಗಿದೆ ಎಂದು ಮಲ್ಪೆಯ ಮೀನುಗಾರರು ದೂರಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಗಡಿಯಿಂದ ಹೊರಗೆ ಅಂದರೆ ಭಾರತ ದೇಶದ ಗಡಿಯೊಳಗೆ ಮೀನುಗಾರಿಕೆ ಮಾಡುತ್ತಿದ್ದ ಬೋಟನ್ನು ಮಾಲ್ವಾನ್ ನ ಸ್ಥಳೀಯ ಮೀನುಗಾರರು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳೆದ ನಡುರಾತ್ರಿ 1 ಗಂಟೆಗೆ ಸುಮಾರಿಗೆ ಮೀನುಗಾರರ ಅಕ್ರಮ ಬಂಧನವಾಗಿದೆ. ನಮ್ಮವರು ನಿಯಮದಂತೆ ಮೀನುಗಾರಿಕೆ ಮಾಡಿದರೂ ಅರೆಸ್ಟ್ ಮಾಡಿದ ಮಹಾರಾಷ್ಟ್ರ ಪೊಲೀಸರ ಕ್ರಮವನ್ನು ಉಡುಪಿ ಬೋಟ್ ಚಾಲಕರ ಸಂಘದ ಅಧ್ಯಕ್ಷ ರವಿ ಖಂಡಿಸಿದ್ದಾರೆ. ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…