Featured

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 7ನೇ ಬಾರಿಗೆ ಸಾಧನಾ ಪ್ರಶಸ್ತಿ – Vishwanews24

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 7ನೇ ಬಾರಿಗೆ ಸಾಧನಾ ಪ್ರಶಸ್ತಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ ೨೦೨೨-೨೩ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿoದ ನೀಡಲ್ಪಡುವ  ಸಾಧನಾ ಪ್ರಶಸ್ತಿ ಸತತ ೭ ನೇ ಬಾರಿಗೆ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ  ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಹಾಗೂ ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಜಗದೀಶ್ ಮೊಗವೀರ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಕಿರಣ್ ಉಪಸ್ಥಿತರಿದ್ದರು.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್  ಶ್ರೀ ಯಶ್‌ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳ ಮೂಲಕ ಗ್ರಾಹಕರಿಗೆ ಆಧುನಿಕ ಬ್ಯಾಂಕಿoಗ್ ಸೌಲಭ್ಯಗಳ ಸೇವೆಯೊಂದಿಗೆ ವ್ಯವಹಾರ ನಡೆಸುತ್ತಿದ್ದು, ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ೧೮% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಆಧುನಿಕ ಬ್ಯಾಂಕಿoಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

9 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago