Featured

ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ  : ಯಶ್ ಪಾಲ್ ಸುವರ್ಣ – vishwanews24

ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ  : ಯಶ್ ಪಾಲ್ ಸುವರ್ಣ

ಬ್ಯಾಂಕಿನ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ  ಮಾಧ್ಯಮಗಳ ಮುಂದೆ ಸುಳ್ಳು ಮಾಹಿತಿ

ವೈಯಕ್ತಿಕ ತೇಜೋವಧೆಯ ದುರುದ್ದೇಶದಿಂದ ಬ್ಯಾಂಕಿನ ಏಳಿಗೆಯನ್ನು ಸಹಿಸದೇ ಆಧಾರರಹಿತ ಆರೋಪ

ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಬ್ಯಾಂಕಿನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾಧ್ಯಮಗಳ ಮುಂದೆ ಸುಳ್ಳು ಮಾಹಿತಿ ನೀಡುತ್ತಿದ್ದು, ಬ್ಯಾಂಕಿನ ಆಡಳಿತ ಮಂಡಳಿ ಈಗಾಗಲೇ ಕಾನೂನು ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಬ್ಯಾಂಕಿನ ವಿರುದ್ಧ ಆರೋಪ ಮಾಡುತ್ತಿರುವ ವ್ಯಕ್ತಿಗಳು ಬ್ಯಾಂಕಿನಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ಬಗ್ಗೆ ಸಹಕಾರಿ ನ್ಯಾಯಾಲಯದಲ್ಲಿ ಸಾಲ ಮರುಪಾವತಿಗೆ ಆದೇಶ ನೀಡಿದ್ದು ತಪ್ಪಿದಲ್ಲಿ ಆಸ್ತಿ ಜಪ್ತಿಗೂ ಸೂಚನೆ ನೀಡಿದೆ.

ಮಹಾಲಕ್ಷ್ಮೀ ಬ್ಯಾಂಕಿನ ಏಳಿಗೆಯನ್ನು ಸಹಿಸದೇ, ವೈಯಕ್ತಿಕ ತೇಜೋವಧೆಯ ದುರುದ್ದೇಶದಿಂದ ಬ್ಯಾಂಕಿನ ವಿರುದ್ಧ ಆಧಾರರಹಿತ ಆರೋಪದ ಮೂಲಕ ಅವರ ಹತಾಶ ಮನಸ್ಥಿತಿ ಬಯಲಾಗಿದೆ. ಈ ಬಗ್ಗೆ ಶನಿವಾರ ಬ್ಯಾಂಕಿನ ವತಿಯಿಂದ ಪತ್ರಿಕಾಗೋಷ್ಟಿ ನಡೆಸಿ ಎಲ್ಲಾ ದಾಖಲೆಗಳನ್ನು ಒದಗಿಸಿ ಮಾಹಿತಿ ನೀಡಲಾಗುವುದು. ಮಹಾಲಕ್ಷ್ಮೀ ಬ್ಯಾಂಕ್‌ ಸಹಕಾರಿ ಇಲಾಖೆ ಹಾಗೂ ಆರ್ ಬಿ ಐ ನಿಯಮಾವಳಿಯಂತೆ ಸಹಕಾರಿ ತತ್ವದಡಿ ಪಾರದರ್ಶಕ ರೀತಿಯಲ್ಲಿ ಬ್ಯಾಂಕಿಂಗ್‌ ವ್ಯವಹಾರ ನಡೆಸುತ್ತಿದ್ದು, ಈ ಬಗ್ಗೆ ರಾಜ್ಯ ಸಹಕಾರ ಇಲಾಖೆ ಅಥವಾ ಇ ಡಿ, ಸಿ. ಬಿ. ಐ. ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಹಾಗೂ ಬ್ಯಾಂಕಿನ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago