Featured

ಉಡುಪಿ : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು – vishwanews24

ಉಡುಪಿ :  ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು

ಉಡುಪಿ : ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆಯ ಸಹಯೋಗದೊಂದಿಗೆ ನೈರುತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.06507 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13ರಂದು ಶುಕ್ರವಾರ ಅಪರಾಹ್ನ 12:30ಕ್ಕೆ ಯಶವಂತಪುರ ದಿಂದ ಹೊರಟು ಮರುದಿನ ಮುಂಜಾನೆ 6:45ಕ್ಕೆ ಮಡಗಾಂವ್ ತಲುಪಲಿದೆ.

ರೈಲು ನಂ.06508 ಮಡಗಾಂವ್ ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಫೆ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಟು ಮರುದಿನ ಮುಂಜಾನೆ 4:45ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ಚೆನ್ನರಾಯಪಟ್ಟಮ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಡಬ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ ಹಾಗೂ ಕಾರವಾರಗಳಲ್ಲಿ ನಿಲುಗಡೆ ಇರಲಿದೆ.

ಈ ರೈಲು ಒಟ್ಟು 20 ಕೋಚ್‌ಗಳನ್ನು ಹೊಂದಿರಲಿದೆ. ಇವುಗಳಲ್ಲಿ ಫಸ್ಟ್ ಕ್ಲಾಸ್ 2ಟಯರ್ 1ಕೋಚ್, 2ಟಯರ್ ಎಸಿ-2, 3ಟಯರ್ ಎಸಿ-2, ಸ್ಲೀಪರ್ ಕೋಚ್-9, ಜನರಲ್-4 ಹಾಗೂ ಎಸ್‌ಎಲ್‌ಆರ್-2 ಕೋಚ್‌ಗಳಿರುತ್ತವೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago