Featured

ಉಡುಪಿ : ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು – vishwanews24

ಉಡುಪಿ :  ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರಿಗೆ ವಿಶೇಷ ರೈಲು

ಉಡುಪಿ : ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರ ವಿಶೇಷ ಬೇಡಿಕೆಯಂತೆ ಯಶವಂತಪುರ- ಮಡಗಾಂವ್ ಜಂಕ್ಷನ್- ಯಶವಂತಪುರ ನಡುವೆ ಕೊಂಕಣ ರೈಲ್ವೆಯ ಸಹಯೋಗದೊಂದಿಗೆ ನೈರುತ್ಯ ರೈಲ್ವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.06507 ಯಶವಂತಪುರ- ಮಡಗಾಂವ್ ಜಂಕ್ಷನ್ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13ರಂದು ಶುಕ್ರವಾರ ಅಪರಾಹ್ನ 12:30ಕ್ಕೆ ಯಶವಂತಪುರ ದಿಂದ ಹೊರಟು ಮರುದಿನ ಮುಂಜಾನೆ 6:45ಕ್ಕೆ ಮಡಗಾಂವ್ ತಲುಪಲಿದೆ.

ರೈಲು ನಂ.06508 ಮಡಗಾಂವ್ ಜಂಕ್ಷನ್- ಯಶವಂತಪುರ ಎಕ್ಸ್‌ಪ್ರೆಸ್ ರೈಲು ಫೆ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಟು ಮರುದಿನ ಮುಂಜಾನೆ 4:45ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ಚೆನ್ನರಾಯಪಟ್ಟಮ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಡಬ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ ಹಾಗೂ ಕಾರವಾರಗಳಲ್ಲಿ ನಿಲುಗಡೆ ಇರಲಿದೆ.

ಈ ರೈಲು ಒಟ್ಟು 20 ಕೋಚ್‌ಗಳನ್ನು ಹೊಂದಿರಲಿದೆ. ಇವುಗಳಲ್ಲಿ ಫಸ್ಟ್ ಕ್ಲಾಸ್ 2ಟಯರ್ 1ಕೋಚ್, 2ಟಯರ್ ಎಸಿ-2, 3ಟಯರ್ ಎಸಿ-2, ಸ್ಲೀಪರ್ ಕೋಚ್-9, ಜನರಲ್-4 ಹಾಗೂ ಎಸ್‌ಎಲ್‌ಆರ್-2 ಕೋಚ್‌ಗಳಿರುತ್ತವೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

6 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

6 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

6 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

6 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

6 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

6 days ago