ಉಡುಪಿ, : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ,ಉಡುಪಿ ಜಿಲ್ಲೆಯಲ್ಲಿ ಕೆಳಕಂಡ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗಿನಿ ಯೋಜನೆ:- 18 ರಿಂದ 55 ವರ್ಷ ವಯಸ್ಸಿನ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ 2.00 ಲಕ್ಷ ಆದಾಯ ಹಾಗೂ ಇತರೆ ವರ್ಗದ 1.50 ಲಕ್ಷ ಆದಾಯ ಹೊಂದಿರುವ ಮಹಿಳೆಯರು ಆದಾಯೋತ್ಪನ್ನಕರ ಚಟುವಟಿಕೆ ಕೈಗೊಳ್ಳಲು ರಾಷ್ಟ್ರೀಕೃತ ಬ್ಯಾಂಕಿನಿoದ ನೀಡುವ ಗರಿಷ್ಠ 3.00 ಲಕ್ಷ ಸಾಲಕ್ಕೆ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಹಿಳೆಯರಿಗೆ ಗರಿಷ್ಠ ರೂ.150000/- ಹಾಗೂ ಇತರೆ ವರ್ಗದ ಮಹಿಳೆಯರಿಗೆ ಗರಿಷ್ಠ ರೂ.90000/- ಸಹಾಯಧನವನ್ನು ನೀಡಲಾಗುವುದು.
ಪರಿಶಿಷ್ಠ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ:- ಸದರಿ ಯೋಜನೆಯಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರಿಗೆ ಬ್ಯಾಂಕಿನಿAದ ನೀಡುವ ಗರಿಷ್ಠ ರೂ.3.00ಲಕ್ಷ ಸಾಲಕ್ಕೆ ಗರಿಷ್ಠ ರೂ.150000/- ಸಹಾಯಧನ ನೀಡಲಾಗುವುದು.
ಕಿರುಸಾಲ ಯೋಜನೆ:-ಸ್ತಿçà ನ್ನು, h gbಶಕ್ತಿ ಗುಂಪುಗಳು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಕನಿಷ್ಠ ರೂ.2.00ಲಕ್ಷ ಉಳಿತಾಯ ಹಾಗೂ ಪ್ರಸ್ತುತ ಬ್ಯಾಂಕ್ ಸಾಲ ಪಡೆಯದ ಗುಂಪುಗಳಿಗೆ ಬಡ್ಡಿ ರಹಿತ ರೂ.2.00ಲಕ್ಷ ಸಾಲ ನೀಡಲಾಗುವುದು.
ಧನಶ್ರೀ ಯೋಜನೆ:-18 ರಿಂದ 60 ವಯೋಮಿತಿಯ ಹೆಚ್.ಐ.ವಿ ಸೋಂಕಿತ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ರೂ.30000/-ಗಳ ಪ್ರೋತ್ಸಾಹಧನ ನೀಡಲಾಗುವುದು.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:-18 ರಿಂದ 60 ವಯೋಮಿತಿಯ ಸದ್ರಿ ಸಮುದಾಯದವರು ಸ್ವ-ಉದ್ಯೋಗ ಕೈಗೊಳ್ಳಲು ರೂ.30000/-ಗಳ ಪ್ರೋತ್ಸಾಹಧನ ನೀಡಲಾಗುವುದು.
ಈ ಎಲ್ಲಾ ಯೋಜನೆಗಳ ಕುರಿತು ಅರ್ಜಿಗಳನ್ನು ಆಹ್ವಾನಿಸಿದ್ದು, ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದು ಸೆಪ್ಟಂಬರ್ 4 ರ ಒಳಗೆ ಸಲ್ಲಿಸತ್ಕದ್ದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ:0820-2574978ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…