Featured

ಉಡುಪಿ  : ಮಹಿಳೆಯರ ಆರೋಗ್ಯ ಚಿಕಿತ್ಸೆಗಾಗಿಯೇ ಬಂದಿದೆ ಆಯುಷ್ಮತಿ ಕ್ಲಿನಿಕ್ – Vishwanews24

ಉಡುಪಿ  : ಮಹಿಳೆಯರ ಆರೋಗ್ಯ ಚಿಕಿತ್ಸೆಗಾಗಿಯೇ ಬಂದಿದೆ ಆಯುಷ್ಮತಿ ಕ್ಲಿನಿಕ್

ಆರೋಗ್ಯ ಸೇವೆಗಳು ಪ್ರತಿಯೊಬ್ಬ ನಾಗರೀಕನ ಹಕ್ಕಾಗಿದ್ದು, ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಕೆಲವೊಂದು ಸಾಮಾಜಿಕ, ಸಾಂಸ್ಕೃತಿಕ ಮತ್ತು ಲಿಂಗ ತಾರತಮ್ಯ ಮನೋಭಾವನೆಗಳ ಕಾರಣಗಳಿಂದಾಗಿ ನಿಯಮಿತ ಹಾಗೂ ಹೆಚ್ಚಿನ ಆರೋಗ್ಯ ಸೇವೆ ಪಡೆಯವುದರಿಂದ ವಂಚಿತರಾಗಿರುತ್ತಾರೆ. ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಮತ್ತು ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು ಪ್ರತ್ಯೇಕ ಕ್ಲಿನಿಕ್‌ಗಳ ಅವಶ್ಯಕತೆ ಇದ್ದು ಮಹಿಳೆಯರಿಗೆ ವಿಶೇಷ ಆರೋಗ್ಯ ಸೇವೆಗಳನ್ನು ಒದಗಿಸಲು ಆಯುಷ್ಮತಿ ಕ್ಲಿನಿಕ್‌ಗಳನ್ನು ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಸ್ಥಾಪಿಸಲಾಗುತ್ತಿದೆ.
ಮಹಿಳೆಯರಿಗೆ ತಮ್ಮ ಆರೋಗ್ಯ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸಲು ಅವಕಾಶ ಕಲ್ಪಿಸುವುದು. ಹದಿಹರೆಯದ ಹೆಣುಮಕ್ಕಳಿಗೆ ದೈಹಿಕ ಬದಲಾವಣೆ ನೈವiðಲ್ಯ ಮತ್ತು ಸಂತಾನೋತ್ಪತ್ತಿ ಕುರಿತು ಅರಿವು ಮೂಡಿಸುವುದು ಮತ್ತು ಆಪ್ತ ಸಮಾಲೋಚನೆ ನಡೆಸುವುದು. ಮೂವತ್ತು ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಅಸಾಂಕ್ರಮಿಕ ರೋಗಗಳ ತಪಾಸಣೆ ನಡೆಸುವುದು. ರೆಫರಲ್ ಸೇವೆ ಒದಗಿಸುವುದು ಈ ಆಯುಷ್ಮತಿ ಕ್ಲಿನಿಕ್ ನ ಪ್ರಮುಖ ಉದ್ದೇಶವಾಗಿದೆ.

.ಈ ಕ್ಲಿನಿಕ್ ನಲ್ಲಿ ಪ್ರತೀ ದಿನ ಒಬ್ಬ ತಜ್ಞ ವೈದ್ಯರ ಸೇವೆಯು ಲಭ್ಯವಿದ್ದು, ಸೋಮವಾರ :ಫಿಜಿಷಿಯನ್, ಮಂಗಳವಾರ : ಮೂಳೆ ಮತ್ತು ಕೀಲು ತಜ್ಞರು, ಬುಧವಾರ : ಶಸ್ರöçಚಿಕಿತ್ಸಾ ತಜ್ಞರು, ಗುರುವಾರ : ಮಕ್ಕಳ ತಜ್ಞರು, ಶುಕ್ರವಾರ : ಸ್ತಿçÃರೋಗ ತಜ್ಞರು ಶನಿವಾರ : ಇತರೆ ತಜ್ಞರು (ಕಿವಿ, ಮೂಗು, ಗಂಟಲು, ಚರ್ಮ, ನೇತ್ರ) ಮಹಿಳೆಯರನ್ನು ತಪಾಸಣೆ ನಡೆಸಲಿದ್ದಾರೆ.

ಅಲ್ಲದೆ ಆಪ್ತ ಸಮಲೋಚನೆ ಸಹ ಲಭ್ಯವಿದ್ದು, ಋತುಚಕ್ರ ಸಂಬAಧಿ ಹಾಗೂ ಋತುಚಕ್ರ ನೈರ್ಮಲ್ಯ, ಕುಟುಂಬ ಕಲ್ಯಾಣ ಯೋಜನೆಗಳು, ಅಸಾಂಕ್ರಾಮಿಕ ರೋಗಗಳು, ಸಂತಾನೋತ್ಪತ್ತಿ ಅಂಗಗಳ ಸೋಂಕು/ಲೈ0ಗಿಕ ಸೋಂಕುಗಳು,ಮಾನಸಿಕ ಆರೋಗ್ಯ ಸಮಸ್ಯೆಗಳು, ಹದಿಹರೆಯದ ಸಮಸ್ಯೆಗಳು, ಮುಟ್ಟು ನಿಲ್ಲುವ ಸಮಯದ ಸವiಸ್ಯೆಗಳು, ಪೋಷ್ಟಿಕಾಂಶದ ಕೊರತೆಗಳ ಬಗ್ಗೆ ವೈದ್ಯರಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡಯಬಹುದಾಗಿದ್ದು, ಅಲ್ಲದೇ ಲ್ಯಾಬ್ ಪರೀಕ್ಷೆಗಳ ಸೇವೆ ಮತ್ತು ಉಚಿತ ಔಷಧಿಗಳು ದೊರೆಯುತ್ತವೆ.

ಉಡುಪಿ ಜಿಲ್ಲೆಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ(ಅಲಂಕಾರ್ ಚಿತ್ರಮಂದಿರ ಹತ್ತಿರ)ಯಲ್ಲಿ ಆಯುಷ್ಮತಿ ಕ್ಲಿನಿಕ್ ಆರಂಭಿಸಲಾಗಿದ್ದು, ಈ ಕ್ಲಿನಿಕ್ ಬೆಳಿಗ್ಗೆ ೯ ಘಂಟೆಯಿ0ದ ಸಂಜೆ ೪.೩೦ ರವರೆಗೆ ತೆರೆದಿರುತ್ತದೆ. ಮಹಿಳೆಯವರು ಮತ್ತು ಹದಿಹರೆಯದ ಹೆಣ್ಣುಮಕ್ಕಳು ಇದರ ಸದುಪಯೋಗ ಪಡೆಯಬಹುದಾಗಿದೆ.

ಆರೋಗ್ಯ ಸಮಸ್ಯೆಗಳ ಬಗ್ಗೆ ಪರೀಕ್ಷಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ ನೀಡಲಾಗದೇ, ತಜ್ಞ ವೈದ್ಯರ ಸೇವೆಯಿಂದ ವಂಚಿತರಾಗಿ, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೇ ಸಾಕಷ್ಟು ಸಂಖ್ಯೆಯ ಮಹಿಳೆಯರು ಮತ್ತು ಹದಿ ಹರೆಯದವರು ಅನಾರೋಗ್ಯ ಪೀಡಿತರಾಗಿ,ಅನೇಕ ಸಮಸ್ಯೆಗಳನ್ನು ಎದುರಿಸುತಿದ್ದಾರೆ. ಜಿಲ್ಲೆಯಲ್ಲಿ ಆರಂಭವಾಗಿರುವ ಆಯುಷ್ಮತಿ ಕ್ಲಿನಿಕ್‌ಗಳಲ್ಲಿ ಮಹಿಳೆಯರು ಮತ್ತು ಹದಿ ಹರೆಯದವರಿಗೆ ತಜ್ಞ ವೈದ್ಯರಿಂದ ಉಚಿತ ತಪಾಸಣೆ, ಆಪ್ತ ಸಮಾಲೋಚನೆಯೊಂದಿಗೆ ಅಗತ್ಯ ಔಷಧಗಳನ್ನು ಉಚಿತವಾಗಿ ನೀಡಲಾಗುವುದು. ಜಿಲ್ಲೆಯ ಮಹಿಳೆಯರು ಈ ಕೇಂದ್ರಗಳ ಮೂಲಕ ತಮ್ಮ ಆರೋಗ್ಯದ ಕುರಿತಂತೆ ಸಂಪೂರ್ಣ ಪ್ರಯೋಜನ ಪಡೆಯಬಹುದಾಗಿದೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

24 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

24 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago