ಉಡುಪಿ: ಮಹಿಳೆಯರ ಕನಿಷ್ಠ ವಿವಾಹದ ವಯಸ್ಸನ್ನು 21ಕ್ಕೆ ಏರಿಸುವ ಕೇಂದ್ರ ಸರ್ಕಾರದ ನಿರ್ಧಾರದಿಂದ ವಿರುದ್ಧ ಸ್ವರ್ಣವಲ್ಲಿ ಸ್ವಾಮಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಕೃಷ್ಣಮಠದ ವಿಶ್ವಾರ್ಪಣಂ ಧಾರ್ಮಿಕ ಸಭೆಯಲ್ಲಿ ಮಾತಮಾಡಿದ ಸ್ವಾಮೀಜಿ, “ಕ್ರೈಸ್ತರಿಗೆ ಮುಸ್ಲಿಮರಿಗೆ ವಿವಾಹದ ಕಾನೂನು ಬೇರೆ ಇದೆ. ಈ ನಿರ್ಧಾರ ಹಿಂದೂಗಳಿಗೆ ಅನ್ಯಾಯವಾಗುತ್ತದೆ .ನೀವು ಮಾಡುತ್ತಿರುವ ಹೊಸ ನಿರ್ಣಯ ಹಿಂದೂಗಳಿಗೆ ಮಾತ್ರ ಯಾಕೆ? ಎಲ್ಲರಿಗೂ ಅನ್ವಯವಾಗುವ ರೀತಿ ನೀವು ಯಾಕೆ ಕಾನೂನು ಕಾಯ್ದೆ ಯಾಕೆ ರೂಪಿಸುತ್ತಿಲ್ಲ. ಎಲ್ಲರಿಗೆ ಸಮಾನ ಕಾಯ್ದೆ ಜಾರಿಗೆ ತನ್ನಿ ಅದಕ್ಕೆ ನಮ್ಮ ಪೂರ್ತಿ ಬೆಂಬಲವಿದೆ ಎಂದು ಹೇಳಿದರು.
ಮುಸ್ಲಿಮರ ಕಾನೂನಲ್ಲಿ ವಿವಾಹದ ವಯಸ್ಸು ಈಗಲೂ 15 ಇದೆ. ಈ ಕಾನೂನಿನ ಪ್ರಕಾರ ಮುಸ್ಲಿಮರ ಜನಸಂಖ್ಯೆ ಏರಿಕೆ ಪ್ರಮಾಣ ಜಾಸ್ತಿ ಇದೆ. ಹಿಂದೂಗಳ ಜನಸಂಖ್ಯೆ ಅದರ ಕಮ್ಮಿ ಇದೆ. ಹಿಂದೂಗಳ ಸಂಖ್ಯೆ ಇಳಿಕೆಯಾಗುತ್ತಿರುವ ವಿಚಾರದಲ್ಲಿ ರಾಷ್ಟ್ರಮಟ್ಟದಲ್ಲಿ ಸಂತರು ಕಳವಳಗೊಂಡಿದ್ದಾರೆ. ನಮ್ಮ ದೇಶದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುವ ಅಪಾಯ ಇದೆ. ಇದರ ಬಗ್ಗೆ ಗಂಭೀರವಾದ ಚಿಂತನೆ ಮಾಡಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಿವಿ ಹಿಂಡಿದ್ದಾರೆ.
ಜಪಾನ್ ಬ್ರಿಟನ್ ಅಮೆರಿಕದಲ್ಲಿ ಮದುವೆಗೆ 16ರಿಂದ 18 ವಯೋಮಿತಿ ಇದೆ. ಸರಕಾರ ಕೊಡುವ ವೈಜ್ಞಾನಿಕ ಕಾರಣಗಳು ಬಗ್ಗೆ ನಮಗೆ ಒಪ್ಪಿಗೆ ಇದೆ ಆದರೆ ಹೆಣ್ಣುಮಕ್ಕಳಿಗೆ ತೊಂದರೆ ಆಗಬಾರದು. ತಡವಾದ ವಿವಾಹದಿಂದ ವಿಚ್ಛೇದನ ಜಾಸ್ತಿಯಾಗಿದೆ. ಕುಟುಂಬ ವ್ಯವಸ್ಥೆ ಶಿಥಿಲಗೊಂಡಿದೆ. ವಿವಾಹದ ವಯಸ್ಸನ್ನು ಸರಕಾರ ಏರಿಕೆ ಮಾಡಿರುವುದರಿಂದ ಇನ್ನಷ್ಟು ಸಮಸ್ಯೆಗಳು ಬಾಧಿಸಲಿದೆ ಎಂದು ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…