Featured

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು.

ಘಟನೆ ವಿವರ: ಮಂಚಿ ಕುಮೇರಿ ನಿವಾಸಿ ರಮಾನಾಥ ರೈ ಅವರು ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7ಗಂಟೆ ಸುಮಾರಿಗೆ ಅವರ ಅಕ್ಕನ ಮಗ ಮಿಥುನ್ ಹಾಗೂ ಆತನ ಸ್ನೇಹಿತ ನಾಗೇಶ್ ಪೂಜಾರಿ ಮನೆಗೆ ಬಂದು ಕರೆಗಂಟೆ ಒತ್ತಿದ್ದು, ಪರಿಚಿತರಾಗಿದ್ದರಿಂದ ಸುಮತಿ ಬಾಗಿಲು ತೆರೆದಿದ್ದಾರೆ. ಮನೆಗೆ ಒಳನುಗ್ಗಿದ ಇಬ್ಬರು ಆರೋಪಿಗಳು ಸುಮತಿ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆಯನ್ನು ಹಿಸುಕಿದ್ದಾರೆ. ಪರಿಣಾಮವಾಗಿ ಸುಮತಿ ಪ್ರಜ್ಞಾಹೀನರಾಗಿದ್ದಾರೆ.

ಇದನ್ನೂ ಓದಿ :

ನಂತರ ಆರೋಪಿಗಳು ಅವರನ್ನು ಚೀಲದಲ್ಲಿ ಹಾಕಿ ಸೂಟ್‌ಕೇಸಿನಲ್ಲಿ ತುಂಬಿಸಿ ಸ್ಥಳಾಂತರ ಮಾಡಲು ಯತ್ನಿಸುತ್ತಿದ್ದಾಗ, ರಮಾನಾಥ ರೈ ಹಾಗೂ ನೆರೆಹೊರೆಯವರು ಬಾಗಿಲು ತಟ್ಟಿದ ಹಿನ್ನೆಲೆಯಲ್ಲಿ ಆರೋಪಿಗಳು ಬಾಗಿಲು ತೆರೆದು ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆದರೆ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಂತರ ಸೂಟ್‌ಕೇಸನ್ನು ತೆರೆದು ನೋಡಿದಾಗ ಸುಮತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಅವರನ್ನು ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಒಂದು ವಾರ ಚಿಕಿತ್ಸೆ ಬಳಿಕ ಅವರು ಚೇತರಿಸಿ ಕೊಂಡಿದ್ದಾರೆ.

ಇದನ್ನೂ ಓದಿ :

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಅವರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ, ಜೀವಾವಧಿ ಶಿಕ್ಷೆ ಹಾಗೂ ತಲಾ 20,000 ರೂ. ದಂಡ, ಕಲಂ 325ರಡಿ – 5 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 5,000ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಇದಲ್ಲದೆ, ವಸೂಲಾದ ದಂಡದಲ್ಲಿ 45,000ರೂ.ವನ್ನು ಗಾಯಾಳು ಸುಮತಿ ಅವರಿಗೆ ಪರಿಹಾರವಾಗಿ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

3 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

4 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

4 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

5 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

5 hours ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

5 hours ago