Featured

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ – Vishwanews24

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.
ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ, ಸಾಲಿಗ್ರಾಮದ ಸೀತಾ ನದಿಯ ಹಿನ್ನೀರಿನಲ್ಲಿ ನಡುವಿನ ದಟ್ಟ ಕಾಂಡ್ಲಾವನದ ನಡುವೆ ಕಯಾಕಿಂಗ್ ಮಾಡಲು ಬಳಸುವ ದೋಣಿಗಳ ಮೂಲಕ ಮತದಾನ ಜಾಗೃತಿಯ ಸಂದೇಶವನ್ನು ಸಾರಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಬಳಿಯ ಕಯಾಕಿಂಗ್ ಪಾಯಿಂಟ್ ಬಳಿಗೆ ತೆರಳಿದ ,ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕೂರ್ಮರಾವ್ ಎಂ , ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ , ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್, ಅವರು ಕಯಾಕಿಂಗ್ ಪ್ರಾರಂಭದ ಸ್ಥಳದಲ್ಲಿ ತುಳುನಾಡಿನ ಸಾಂಪ್ರದಾಯಿಕ ಅಡಿಕೆ ಮುಟ್ಟಾಳೆ ಧರಿಸಿ, ಸ್ಥಳದಲ್ಲಿ ಅಳವಡಿಸಲಾಗಿದ್ದ ನೈತಿಕ ಮತದಾನ ಪ್ರತಿಜ್ಞೆ ಕುರಿತ ಫಲಕದಲ್ಲಿ ಸಹಿ ಮಾಡಿ, ಸಂಪೂರ್ಣ ಸುರಕ್ಷತಾ ಉಪಕರಣಗಳನ್ನು ಧರಿಸಿ ಕಯಾಕಿಂಗ್ ಆರಂಭಿಸಿದರು.

ಸುಮಾರು ೩೦ ನಿಮಿಷಗಳ ಕಯಾಕಿಂಗ್ ನಂತರ ಮಾಂಗ್ರೋವ್ ಕಾಡುಗಳ ಮಧ್ಯೆ ಇರುವ ಪ್ರದೇಶದಲ್ಲಿ ಸುಮಾರು ೪೦ ಕ್ಕೂ ಹೆಚ್ಚು ಕಯಾಕ್ ದೋಣಿಗಳ ಮೂಲಕ ಮತದಾನ ದಿನವಾದ, ಮೇ ೧೦ ದಿನಾಂಕದ ಚಿತ್ರಣ ರೂಪಿಸಿ ಮತ್ತು ಮತದಾನ ಜಾಗೃತಿಯ ಫಲಕವನ್ನು ನೀರಿನ ಮೇಲೆ ಪ್ರದರ್ಶಿಸಿ ಅತ್ಯಂತ ಆಕರ್ಷಕ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.

ಕಯಾಕಿಂಗ್ ನ ಆರಂಭದ ಸ್ಥಳದಿಂದ ನದಿ ಮಧ್ಯದ ಕಾರ್ಯಕ್ರಮ ನಡೆಯವ ಸ್ಥಳದ ವರೆಗೂ ನದಿಯಲ್ಲಿ ಮತದಾನ ಜಾಗೃತಿ ಸಾರುವ ಯಕ್ಷಗಾನ ಮುಖುಟ ಮಾದರಿಯ ಆಕೃತಿಗಳು ಗಮನ ಸೆಳೆದವು.

ಇದೇ ಸಂದರ್ಭದಲ್ಲಿ, ಕಯಾಕಿಂಗ್ ಮೂಲಕ ಆ ಪ್ರದೇಶಕ್ಕೆ ಆಗಮಿಸಿದ್ದ ಮಣೂರು ಪಡುಕೆರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಭೋಧಿಸಿ,ಮತದಾನ ದಿನಾಂಕವನ್ನು ಒಳಗೊಂಡ ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಕೂಡಾ ಜಾಗೃತಿ ಮೂಡಿಸಲಾಯಿತು.
ಈ ವಿಶಿಷ್ಠ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಕಯಕಿಂಗ್ ಪಾಯಿಂಟ್ ನಲ್ಲಿ ಕಾರ್ಯನಿರ್ವಹಿಸುವ ವಿವಿಧ ಸಂಸ್ಥೆಗಳು ಮತ್ತು ಸಿಬ್ಬಂದಿ ಅಗತ್ಯ ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು.

ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಹಿನ್ನಿರಿನಲ್ಲಿ ಮಾಂಗ್ರೋವ್ ವನದ ನಡುವೆ ಕಯಾಕ್ ಗಳ ಮೂಲಕ ವಿಶಿಷ್ಠ ಮತ್ತು ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಪ್ರವಾಸಿ ತಾಣಗಳು ಹಾಗೂ ಸಾಹಸ ಚಟುವಟಿಕೆಗಳು ನಡೆಯುವ ಸ್ಥಳಗಳು ಯುವ ಜನತೆಯನ್ನು ಹೆಚ್ಚು ಆಕರ್ಷಿಸಲಿದ್ದು, ಇಲ್ಲಿ ನಡೆಸುವ ಮತದಾನ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ ಜನತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ಸೆಳೆಯಲು ಸಹಕಾರಿಯಾಗಲಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago