ಉಡುಪಿ: ತಾಲೂಕು ಪಂಚಾಯತ್ ಮಾಜಿ ಸದಸ್ಯ, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ ಸೊರ್ಪು ತುಂಡುಬಲ್ಲೆ ನಿವಾಸಿ ಕೆ. ಕೃಷ್ಣ (ಕುಟ್ಟಿ) ಪೂಜಾರಿ ತುಂಡುಬಲ್ಲೆ (64) ಅವರು ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
ಹಿರಿಯ ಕಾಂಗ್ರೆಸ್ ಧುರೀಣರಾಗಿದ್ದ ಅವರು ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಶಿರ್ವ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಶಿರ್ವ ಸಹಕಾರಿ ಸಂಘದ ನಿರ್ದೇಶಕರಾಗಿ, ಬಿಲ್ಲವ ನಾಯಕರಾಗಿ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕಳೆದಬಾರಿ ನಡೆದ ಗ್ರಾಮ ಪಂಚಾಯತ್ ಚುನಾವಣೇಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಡವರಿಗೆ ಸಹಾಯ ಹಸ್ತ ಚಾಚುತ್ತಿದ್ದ ಕುಟ್ಟಿ ಪೂಜಾರಿಯವರ ನಿಧನಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಇಗ್ನೇಷಿಯಸ್ ಡಿಸೋಜ, ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೆಲ್ವಿನ್ ಡಿಸೋಜಾ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಿಲ್ಸನ್ ರೊಡ್ರಿಗಸ್ , ಗೀತಾ ವಾಗ್ಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ರಮೇಶ್ ಬಂಗೇರ ರತನ್ ಕುಮಾರ್ ಶೆಟ್ಟಿ ಸಂತೋಷ್ ಪೂಜಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮರಾಯ ಪಾಟ್ಕರ್ ಉಪಾಧ್ಯಕ್ಷರಾದ ಗ್ರೇಸಿ ಕಾರ್ಡೋಜಾ ,ಹಸನಬ್ಬ ಶೇಖ್ ,ಸುಧೀರ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ ಸಂತಾಪ ಸೂಚಿಸಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ತಾಲ್ಲೂಕು ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ಶಿರ್ವ ಸೊಸೈಟಿಯ ನಿರ್ದೇಶಕರಾಗಿ ಬಿಲ್ಲವ ಸಮಾಜದ ಮುಖಂಡರಾಗಿ,ಹೋಟೆಲ್ ಉದ್ಯಮಿಯಾಗಿ ಜನರ ಸೇವೆ ಸಲ್ಲಿಸಿದ ಧೀಮಂತ ವ್ಯಕ್ತಿ. ಶಿರ್ವ ಗ್ರಾಮೀಣ ಕಾಂಗ್ರೆಸ್ ನ ಚುಕ್ಕಾಣಿ ಹಿಡಿದು ಕಳೆದ ಬಾರಿ ನಡೆದ ಗ್ರಾಪಂ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಮಹತ್ತರವಾದದ್ದು ತಮಗೆ ಅಸೌಖ್ಯವಿದ್ದರೂ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರದಲ್ಲಿ ಭಾಗವಹಿಸಿದ್ದರು.
ಸದಾ ಬಡವರ ಪರ ತಮ್ಮ ಜೀವನವನ್ನೇ ಸಮರ್ಪಿಸಿದವರು. ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ ಕುಟ್ಟಿಯಣ್ಣನವರು ತಮ್ಮ ಬಳಿ ಬಂದವರಿಗೆ ಬರಿಗೈಯಲ್ಲಿ ಕಳುಹಿಸಿದವರಲ್ಲ. ಯಾವತ್ತು ಕೂಡ ತಮ್ಮ ಅನಾರೋಗ್ಯದ ಬಗ್ಗೆ ಚಿಂತಿಸದೆ ಸಮಾಜಸೇವೆ ಮಾಡುತ್ತಿದ್ದರು. ಅನೇಕ ಯುವಕರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಿದವರು. ಅಸೌಖ್ಯದಲ್ಲಿದ್ದರೂ ಸದಾ ಕಾಂಗ್ರೆಸ್ ಪಕ್ಷದ ಪರ ಅವರ ಅಭಿಮಾನ ಹಾಗೆಯೇ ಇತ್ತು. ಕುಟ್ಟಿಯಣ್ಣನವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ಆದ ನಷ್ಟವನ್ನು ದೇವರು ಭರಿಸಲಿ ಎಂದು ಕೋರಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೆಲ್ವಿನ್ ಡಿಸೋಜಾ ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…