Featured

ಉಡುಪಿ:  ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ ..?: vishwanews24

ಉಡುಪಿ:  ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ.?

ಕೇಂದ್ರ ಮಾಜಿ ಸಚಿವರ ಉಪಸ್ಥಿತಿಯ ಸಭೆಯಲ್ಲಿ ಮೌನ‌ಪ್ರಾರ್ಥನೆಯೂ ಸಲ್ಲಿಸದೆ ಸದಸ್ಯತ್ವ ಅಭಿಯಾನ ಸಭೆ ನಡೆಸಿದ ಜಿಲ್ಲಾ ಬಿಜೆಪಿ -ಕಾರ್ಯಕರ್ತರಲ್ಲಿ ಅಸಮಾಧಾನ..

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷ ಆಯ್ಕೆಯ ನಂತರ ದಿನದಿಂದ ದಿನಕ್ಕೆ ಗೊಂದಲ ಹಾಗೂ ಅಸಮಾಧಾನ ಕೇಳಿ ಬರುತ್ತಿದ್ದು ಈ ನಡುವೆ ಇಂದು ಮತ್ತೊಂದು ಬೇಸರದ ಸಂಗತಿ ಹೊರಬಿದ್ದಿದೆ.

ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಬಗ್ಗೆ ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು.

ಸಭೆ ಆರಂಭಿಸುವ ಮುನ್ನಾ ಕನಿಷ್ಠಪಕ್ಷ ಉಡುಪಿ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರು ಆಗಿದ್ದ ಕೀರ್ತಿಶೇಷ ಕೆ .ಲಕ್ಷ್ಮೀನಾರಾಯಣ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಸೌಜನ್ಯ ತೋರದಿರುವ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ.

ಶುಕ್ರವಾರದಂದು ದಿವಂಗತರಾಗಿದ್ದ ಮಾಜಿ ಶಾಸಕ ಕೆ .ಲಕ್ಷ್ಮಿ ನಾರಾಯಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸದೆ ಜಿಲ್ಲಾ ಸಭೆ ನಡೆಸಿದ ಜಿಲ್ಲಾಧ್ಯಕ್ಷರ ನಡೆಯ ಬಗ್ಗೆ ಸಭೆಯಲ್ಲಿದ್ದ ಹಲವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ “ಹಿರಿಯ ನಾಯಕ:- ಸದ್ಯದ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅನ್ಯ ಪಕ್ಷದವರಿಂದ ನಡೆಸಲ್ಪಡುತ್ತಿದೆ ಅನ್ನಿಸತೊಡಗಿದೆ.ಪಕ್ಷಕ್ಕಾಗಿ ದುಡಿದ ಕೆ.ಲಕ್ಷ್ಮೀನಾರಾಯಣ ಅವರಿಗೆ ಶೃದ್ದಾಂಜಲಿ ಸಭೆ ಕೂಡ ಮಾಡಿಲ್ಲ ಕನಿಷ್ಠ ಪಕ್ಷ ಮೌನ ಪ್ರಾರ್ಥನೆ ಮಾಡಿಯಾದರೂ ಸಭೆ ಆರಂಭಿಸುವುದು ಸೌಜನ್ಯ ಅದು ನಡೆಸಿಲ್ಲ ಅಂದರೆ ವಿಪರ್ಯಾಸವೆಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago