ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷ ಆಯ್ಕೆಯ ನಂತರ ದಿನದಿಂದ ದಿನಕ್ಕೆ ಗೊಂದಲ ಹಾಗೂ ಅಸಮಾಧಾನ ಕೇಳಿ ಬರುತ್ತಿದ್ದು ಈ ನಡುವೆ ಇಂದು ಮತ್ತೊಂದು ಬೇಸರದ ಸಂಗತಿ ಹೊರಬಿದ್ದಿದೆ.
ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಬಗ್ಗೆ ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು.
ಸಭೆ ಆರಂಭಿಸುವ ಮುನ್ನಾ ಕನಿಷ್ಠಪಕ್ಷ ಉಡುಪಿ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರು ಆಗಿದ್ದ ಕೀರ್ತಿಶೇಷ ಕೆ .ಲಕ್ಷ್ಮೀನಾರಾಯಣ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಸೌಜನ್ಯ ತೋರದಿರುವ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ.
ಶುಕ್ರವಾರದಂದು ದಿವಂಗತರಾಗಿದ್ದ ಮಾಜಿ ಶಾಸಕ ಕೆ .ಲಕ್ಷ್ಮಿ ನಾರಾಯಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸದೆ ಜಿಲ್ಲಾ ಸಭೆ ನಡೆಸಿದ ಜಿಲ್ಲಾಧ್ಯಕ್ಷರ ನಡೆಯ ಬಗ್ಗೆ ಸಭೆಯಲ್ಲಿದ್ದ ಹಲವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ “ಹಿರಿಯ ನಾಯಕ:- ಸದ್ಯದ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅನ್ಯ ಪಕ್ಷದವರಿಂದ ನಡೆಸಲ್ಪಡುತ್ತಿದೆ ಅನ್ನಿಸತೊಡಗಿದೆ.ಪಕ್ಷಕ್ಕಾಗಿ ದುಡಿದ ಕೆ.ಲಕ್ಷ್ಮೀನಾರಾಯಣ ಅವರಿಗೆ ಶೃದ್ದಾಂಜಲಿ ಸಭೆ ಕೂಡ ಮಾಡಿಲ್ಲ ಕನಿಷ್ಠ ಪಕ್ಷ ಮೌನ ಪ್ರಾರ್ಥನೆ ಮಾಡಿಯಾದರೂ ಸಭೆ ಆರಂಭಿಸುವುದು ಸೌಜನ್ಯ ಅದು ನಡೆಸಿಲ್ಲ ಅಂದರೆ ವಿಪರ್ಯಾಸವೆಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…