Featured

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಅಕ್ರಮ ರೆಸಾರ್ಟ್ ನಿರ್ಮಾಣ ಆರೋಪ – Vishwanews24

ಉಡುಪಿ: ಮಾಜಿ ಶಾಸಕ ರಘುಪತಿ ಭಟ್ ಅಕ್ರಮ ರೆಸಾರ್ಟ್ ಆರೋಪ

ಉಡುಪಿ: ಬಡಾನಿಡಿಯೂರು ಕಡಲ ತೀರದಲ್ಲಿ ಮಾಜಿ ಶಾಸಕ ರಘುಪತಿ ಭಟ್ ರೆಸಾರ್ಟ್ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸ ಲಾಗುವುದು ಎಂದು ಬಡಾನಿಡಿಯೂರು ಕರಾವಳಿ ಯುವಕ ಮಂಡಲ ಮತ್ತು ಕರಾವಳಿ ಮಹಿಳಾ ಮಂಡಲದ ನೇತೃತ್ವದಲ್ಲಿ ಇಂದು ಬಡಾನಿಡಿಯೂರು ಸಮುದ್ರ ತೀರದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಕರಾವಳಿ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶಿವಾನಂದ ಸುವರ್ಣ, ಬಡಾನಿಡಿಯೂರು ಗ್ರಾಮದ ಸರ್ವೆ ನಂಬರ್ 118ರಲ್ಲಿ ಮಾಜಿ ಶಾಸಕ ಕೆ.ರಘುಪತಿ ಭಟ್ ಮತ್ತು ಅವರ ಶ್ರೀನಿವಾಸ ಅಸೋಸಿಯೇಟ್ ಎಂಬ ಸಂಸ್ಥೆ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಲು ಹುನ್ನಾರ ನಡೆಸುತ್ತಿದೆ. ಇಲ್ಲಿರುವ ಸರಕಾರಿ ಜಾಗದಲ್ಲಿ ಕರಾವಳಿ ಯುವಕ ಮಂಡಲ ಕ್ರೀಡಾಂಗಣ ಹಾಗೂ ಉದ್ಯಾನವನ ನಿರ್ಮಿಸಲು ಮಣ್ಣು ಹಾಕಿದಾಗ ಮಾಜಿ ಶಾಸಕರು ಕರೆ ಮಾಡಿ ಮಣ್ಣು ತೆರವುಗೊಳಿಸುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.

ಈ ಪ್ರದೇಶದಲ್ಲಿ ತಲಾತಲಾಂತರದಿಂದ ಸಾಂಪ್ರಾದಾಯಿಕ ಮೀನುಗಾರಿಕೆ ನಡೆಸಲಾಗುತ್ತಿದೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಇದು ಸಂಪೂರ್ಣ ವಸತಿ ಪ್ರದೇಶವಾಗಿದೆ. ಇಲ್ಲಿ ಸುಮಾರು 50 ಕೋಟಿ ರೂ.ಗೂ ಅಧಿಕ ಬಂಡವಾಳ ಹಾಕಿ ಈ ದೊಡ್ಡ ಯೋಜನೆ ಮಾಡುವ ಮೂಲಕ ಪಾಶ್ಚಿಮಾತ್ಯ ಸಂಸ್ಕೃತಿ ಹೇರುವ ಪ್ರಯತ್ನ ನಡೆಸಲಾಗುತ್ತಿದೆ. ರೆಸಾರ್ಟ್‌ನಲ್ಲಿ ಪಬ್, ಬಾರ್‌ಗಳು ಕೂಡ ನಿರ್ಮಿಸಬೇಕಾಗುತ್ತದೆ. ಈ ರೀತಿಯ ಸಂಸ್ಕೃತಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು.

ಸ್ಥಳೀಯ ಮೀನುಗಾರ ಸುರೇಶ್ ಬಂಗೇರ ಮಾತನಾಡಿ, ಇದು ನಮ್ಮ ಹಿರಿಯರು ಹಲವಾರು ವರ್ಷಗಳಿಂದ ಸಾಂಪ್ರಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಸ್ಥಳ. ವರ್ಷದ ಏಳು ತಿಂಗಳು ಬೋಟಿನಲ್ಲಿ ಕೆಲಸ ಮಾಡಿದರೆ, ಉಳಿದ ತಿಂಗಳು ಸಾಂಪ್ರಾದಾಯಿಕ ಮೀನುಗಾರಿಕೆ ನಡೆಸಲಾಗುತ್ತಿದೆ. ಒಂದು ವೇಳೆ ಸಮುದ್ರ ತೀರಕ್ಕೆ ಹೋಗುವ ಜಾಗವನ್ನು ಬಂದ್ ಮಾಡಿ ರೆಸಾರ್ಟ್ ನಿರ್ಮಿಸಿದರೆ ಎಲ್ಲ ಮೀನುಗಾರರಿಗೆ ತೊಂದರೆ ಆಗುತ್ತದೆ. ಅಕ್ರಮವಾಗಿ ನಡೆಸುತ್ತಿರುವ ಈ ರೆಸಾರ್ಟ್ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ತೊಟ್ಟಂ ಸರ್ವಧರ್ಮ ಸಮನ್ವಯ ಸಮಿತಿ ಅಧ್ಯಕ್ಷ ರಮೇಶ್ ತಿಂಗಳಾಯ ಮಾತನಾಡಿ, ಕರಾವಳಿ ಪ್ರದೇಶ ಮೀನುಗಾರರಿಗೆ ಸೀಮಿತವಾದ ಪ್ರದೇಶ. ಇಲ್ಲಿ 50-60 ಮನೆಗಳು ಸರಕಾರಿ ಜಾಗದಲ್ಲಿ ಇದೆ. ಅದಕ್ಕೆ ಈವರೆಗೆ ವಾಸ್ತವ್ಯ ದೃಢೀಕರಣ ಪತ್ರ ಆಗಲಿ, ಹಕ್ಕುಪತ್ರವಾಗಲಿ ಇನ್ನೂ ದೊರೆತಿಲ್ಲ. ಆದರೆ ಈ ಬಂಡವಾಳಶಾಹಿಗಳು ಯಾವುದೇ ಕಾನೂನಿನ ಅಡೆತಡೆಗಳಿಲ್ಲದೆ ಸುಲಭವಾಗಿ ತಮ್ಮ ಕಾರ್ಯ ಮಾಡುತ್ತಿದ್ದಾರೆ. ಹಾಗಾದರೆ ಕಾನೂನು ಇರುವುದು ಬಡವರಿಗೆ ಮಾತ್ರವೇ ಶ್ರೀಮಂತ್ರಿಗೆ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಕರಾವಳಿ ಯುವಕ ಮಂಡಲದ ಅಧ್ಯಕ್ಷ ನಾಗೇಂದ್ರ ಮೆಂಡನ್, ಕರಾವಳಿ ಮಹಿಳಾ ಮಂಡಲದ ಅಧ್ಯಕ್ಷೆ ನಳಿನಿ ಸದಾಶಿವ, ಗುರಿಕಾರ ರಾಮಪ್ಪ ಸಾಲ್ಯಾನ್, ಮುಖಂಡರಾದ ದಯಾನಂದ ಸುವರ್ಣ, ಗಂಗಾಧರ ಮೈಂದನ್, ಗೋಪಾಲ ಕರ್ಕೇರ, ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಧನಂಜಯ ಎಸ್.ಮೆಂಡನ್ ಸ್ವಾಗತಿಸಿ ದರು. ಮುರಳೀಧರ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.”

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago