Judge and gavel in courtroom
ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್ ರಾವ್ ಖುಲಾಸೆಗೊಂಡಿದ್ದಾರೆ.
ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್ ರಾವ್ ವಿರುದ್ಧ ಪ್ರಕರಣ ದಾಖಲಾಗಿತ್ತು.
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ವಿಚಾರದಲ್ಲಿ ಭಟ್ ಬಾಲ್ಯ ಸ್ನೇಹಿತ, ಅತುಲ್ ರಾವ್ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ 2008ರ ಜೂ. 19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯವು 2023ರ ನ.10ರಂದು ಆರೋಪಿ ಅತುಲ್ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಇದರ ವಿರುದ್ಧ ಅತುಲ್ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿಗಳಾದ ಅರುಣ್ ಬಂಗೇರ ಹಾಗೂ ಸ್ಟೀವನ್ ಲೂಯಿಸ್ ವಾದ ಮಂಡಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…