ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ : ಬಿ.ಸಿ.ಪಾಟೀಲ್ -Vishwanews24
ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ : ಬಿ.ಸಿ.ಪಾಟೀಲ್ -Vishwanews24
ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಅವರ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಕ್ಕಿಸಿ ಹಾಕಿದ್ದಾರೆ. ಶೀಘ್ರದಲ್ಲಿ ಸತ್ಯ ಹೊರಬರುತ್ತದೆ. ನಂತರ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನವನ್ನು ಪಕ್ಷದ ವರಿಷ್ಠರು ಕೊಡತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ ನಿರ್ನಾಮವಾಗಿದೆ. ಕೂಸು ಹುಟ್ಟೋಕು ಮುಂಚೆ ಕುಲಾವಿ ಹೊಲಿಸಿದರು ಎಂದ ಹಾಗಾಯಿತು ಎಂದು ಲೇವಡಿ ಮಾಡಿದರು.
2023 ಚುನಾವಣೆ ಬರಬೇಕು. ಅದರಲ್ಲಿ ಜನರು ಕೊಟ್ಟ ಫಲಿತಾಂಶ ಬರಬೇಕು. ಕಾಂಗ್ರೆಸ್ ನವರ ಕನಸು ನನಸಾಗದು. ಮತ್ತೆ ಬಿಜೆಪಿ ಬರುತ್ತದೆ. ನಾವೇ ಸರ್ಕಾರ ನಡೆಸುತ್ತೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು.
