ಉಡುಪಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ . ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿಯೂ ಉತ್ತಮ ಕಾರ್ಯನಿರ್ವಹಿಸಿದ್ದು ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ ಸಾವಿರಾರು ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಿ ಜೀವನದ ದಾರಿಯನ್ನು ತೆರೆದಿಡುವಲ್ಲಿ ಅವರ ದೂರದೃಷ್ಟಿಯ ಪಾತ್ರ ಸದಾ ಸ್ಮರಣೀಯ.
ಸಜ್ಜನಿಕೆ ,ಸಭ್ಯತೆ , ಸದಾಚಾರ ಮತ್ತು ಧರ್ಮ ಸಂಪನ್ನರೂ ಆಗಿದ್ದು ಶ್ರೀಮಠದ ಹಾಗೂ ನಮ್ಮ ಗುರುಗಳ ವಿಶೇಷ ಭಕ್ತರಾಗಿದ್ದರು . ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪಂಚಮ ಶ್ರೀ ಕೃಷ್ಣ ಪರ್ಯಾಯದ ಸಂದರ್ಭದಲ್ಲಿ ರಾಷ್ಟ್ರ ರತ್ನ ಬಿರುದಿನೊಂದಿಗೆ ಸಂಮಾನಿಸಿದ್ದನ್ನು ಸ್ಮರಿಸುತ್ತೇವೆ .
ಗುರುಗಳ ಬಳಿಕ ನಮ್ಮ ಮೇಲೂ ಅದೇ ಅಭಿಮಾನ,ಭಕ್ತಿ ಪ್ರೀತಿಯನ್ನು ಹೊಂದಿದ್ದ ಕೃಷ್ಣ ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ; ಅವರ ಕುಟುಂಬಕ್ಕೂ ಅವರ ವಿಯೋಗದ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀ ಕೃಷ್ಣಪರಮಾತ್ಮನಲ್ಲಿ ಪ್ರಾರ್ಥಿಸಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…