ಉಡುಪಿ: ಹೆಬ್ರಿ ತಾಲೂಕಿನ ನಾಡಾಲು ಗ್ರಾಮದ ತಿಂಗಳೆಯಲ್ಲಿ, ತಿಂಗಳೆ ಪ್ರತಿಷ್ಠಾನದಿಂದ ವರ್ಷಂಪ್ರತಿ ಜರಗುವ ಸಾಹಿತ್ಯೋತ್ಸಕ್ಕೆ ಈ ಬಾರಿ ಮಾರ್ಚ್ 8ರಂದು ಸಂಜೆ ಸಾವಂತವಾಡಿ ಸಿಂಧೂದುರ್ಗಾ ಸಂಸ್ಥಾನದ ಘನವೆತ್ತ ರಾಜ ಬಹದ್ದೂರು ಕೇಮ್ ಸಾವಂತ್ ಭೋಸ್ಥೆಯವರು ಭಾಗವಹಿಸಲಿದ್ದಾರೆ
ಅಂದು ಸಂಜೆ 6.00 ರಿಂದ ನಡೆಯುವ 64ನೇಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕದ ಅಪ್ರತಿಮ ಚಿಂತಕಿ ಖ್ಯಾತ ವಾಗ್ನಿಗಳಾದ ಡಾ। ವೀಣಾ ಬನ್ನಂಜೆಯವರು ಅನುಭವ ಮಂಟಪ ಎನ್ನುವ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಯುವ ವಾಗ್ನಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಇವರು ಇತಿಹಾಸದ ಪುಟಗಳಲ್ಲಿ ಸಾವಂತವಾಡಿ ಎನ್ನುವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.
ತಿಂಗಳೆ ಪ್ರತಿಷ್ಠಾನದಿಂದ ನೀಡಲ್ಪಡುವ ಪ್ರತಿಷ್ಠಿತ ತಿಂಗಳೆ ಪ್ರಶಸ್ತಿಯನ್ನು ಈ ಬಾರಿ ಖ್ಯಾತ ನೇತ್ರ ತಜ್ಞ ಸಮಾಜ ಸೇವಕ ಡಾ| ಕೃಷ್ಣ ಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ, ಉಡುಪಿ ಇವರಿಗೆ ನೀಡಲಾಗುವುದು ಎಂದು ಪ್ರತಿಷ್ಠಾನನ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ| ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುದ್ರುಮನೆ ಹಾಗೂ ಶ್ರೀ ವಿಜಯ ಪಾತ್ರೆಪಕರ್, ಮುಂಬೈ ಇವರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ ‘ಚಕ್ರವ್ಯೂಹ’ ಯಕ್ಷಗಾನವನ್ನು ಅವರ ಶಿಷ್ಯರು ಪ್ರಸ್ತುತ ಪಡಿಸಲಿದ್ದಾರೆ. ಮಾರ್ಚ್ 6, 7 ಮತ್ತು 8 ರಂದು ತಿಂಗಳೆಯ ಧರ್ಮದೇವತೆಗಳ ನೇಮೋತ್ಸವ ನೆರವೇರಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಿರಣ್ ಕುಮಾರ್ ಬೈಲೂರು,ಮುರಳಿ ಕಡೆಕಾರ್, ಬನ್ನಂಜೆ ಸಂಜೀವ ಸುವರ್ಣ,ಡಾ.ಪ್ರಶಾಂತ್ ಉಪಸ್ಥಿತರಿದ್ದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…