Featured

ಉಡುಪಿ:  ಮಾರ್ಚ್ 8 ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – vishwanews24

ಉಡುಪಿ:  ಮಾರ್ಚ್8ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಹೆಬ್ರಿ ತಾಲೂಕಿನ ನಾಡಾಲು ಗ್ರಾಮದ ತಿಂಗಳೆಯಲ್ಲಿ, ತಿಂಗಳೆ ಪ್ರತಿಷ್ಠಾನದಿಂದ ವರ್ಷಂಪ್ರತಿ ಜರಗುವ ಸಾಹಿತ್ಯೋತ್ಸಕ್ಕೆ ಈ ಬಾರಿ ಮಾರ್ಚ್ 8ರಂದು ಸಂಜೆ ಸಾವಂತವಾಡಿ ಸಿಂಧೂದುರ್ಗಾ ಸಂಸ್ಥಾನದ ಘನವೆತ್ತ ರಾಜ ಬಹದ್ದೂರು ಕೇಮ್ ಸಾವಂತ್ ಭೋಸ್ಥೆಯವರು ಭಾಗವಹಿಸಲಿದ್ದಾರೆ

ಅಂದು ಸಂಜೆ 6.00 ರಿಂದ ನಡೆಯುವ 64ನೇಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕದ ಅಪ್ರತಿಮ ಚಿಂತಕಿ ಖ್ಯಾತ ವಾಗ್ನಿಗಳಾದ ಡಾ। ವೀಣಾ ಬನ್ನಂಜೆಯವರು ಅನುಭವ ಮಂಟಪ ಎನ್ನುವ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಯುವ ವಾಗ್ನಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಇವರು ಇತಿಹಾಸದ ಪುಟಗಳಲ್ಲಿ ಸಾವಂತವಾಡಿ ಎನ್ನುವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.

ತಿಂಗಳೆ ಪ್ರತಿಷ್ಠಾನದಿಂದ ನೀಡಲ್ಪಡುವ ಪ್ರತಿಷ್ಠಿತ ತಿಂಗಳೆ ಪ್ರಶಸ್ತಿಯನ್ನು ಈ ಬಾರಿ ಖ್ಯಾತ ನೇತ್ರ ತಜ್ಞ ಸಮಾಜ ಸೇವಕ ಡಾ| ಕೃಷ್ಣ ಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ, ಉಡುಪಿ ಇವರಿಗೆ ನೀಡಲಾಗುವುದು ಎಂದು ಪ್ರತಿಷ್ಠಾನನ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ| ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುದ್ರುಮನೆ ಹಾಗೂ ಶ್ರೀ ವಿಜಯ ಪಾತ್ರೆಪಕರ್‌, ಮುಂಬೈ ಇವರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ ‘ಚಕ್ರವ್ಯೂಹ’ ಯಕ್ಷಗಾನವನ್ನು ಅವರ ಶಿಷ್ಯರು ಪ್ರಸ್ತುತ ಪಡಿಸಲಿದ್ದಾರೆ. ಮಾರ್ಚ್ 6, 7 ಮತ್ತು 8 ರಂದು ತಿಂಗಳೆಯ ಧರ್ಮದೇವತೆಗಳ ನೇಮೋತ್ಸವ ನೆರವೇರಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಿರಣ್ ಕುಮಾರ್ ಬೈಲೂರು,ಮುರಳಿ ಕಡೆಕಾರ್, ಬನ್ನಂಜೆ ಸಂಜೀವ ಸುವರ್ಣ,ಡಾ.ಪ್ರಶಾಂತ್ ಉಪಸ್ಥಿತರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago