Featured

ಉಡುಪಿ:  ಮಾರ್ಚ್ 8 ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – vishwanews24

ಉಡುಪಿ:  ಮಾರ್ಚ್8ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಹೆಬ್ರಿ ತಾಲೂಕಿನ ನಾಡಾಲು ಗ್ರಾಮದ ತಿಂಗಳೆಯಲ್ಲಿ, ತಿಂಗಳೆ ಪ್ರತಿಷ್ಠಾನದಿಂದ ವರ್ಷಂಪ್ರತಿ ಜರಗುವ ಸಾಹಿತ್ಯೋತ್ಸಕ್ಕೆ ಈ ಬಾರಿ ಮಾರ್ಚ್ 8ರಂದು ಸಂಜೆ ಸಾವಂತವಾಡಿ ಸಿಂಧೂದುರ್ಗಾ ಸಂಸ್ಥಾನದ ಘನವೆತ್ತ ರಾಜ ಬಹದ್ದೂರು ಕೇಮ್ ಸಾವಂತ್ ಭೋಸ್ಥೆಯವರು ಭಾಗವಹಿಸಲಿದ್ದಾರೆ

ಅಂದು ಸಂಜೆ 6.00 ರಿಂದ ನಡೆಯುವ 64ನೇಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕದ ಅಪ್ರತಿಮ ಚಿಂತಕಿ ಖ್ಯಾತ ವಾಗ್ನಿಗಳಾದ ಡಾ। ವೀಣಾ ಬನ್ನಂಜೆಯವರು ಅನುಭವ ಮಂಟಪ ಎನ್ನುವ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಯುವ ವಾಗ್ನಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಇವರು ಇತಿಹಾಸದ ಪುಟಗಳಲ್ಲಿ ಸಾವಂತವಾಡಿ ಎನ್ನುವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.

ತಿಂಗಳೆ ಪ್ರತಿಷ್ಠಾನದಿಂದ ನೀಡಲ್ಪಡುವ ಪ್ರತಿಷ್ಠಿತ ತಿಂಗಳೆ ಪ್ರಶಸ್ತಿಯನ್ನು ಈ ಬಾರಿ ಖ್ಯಾತ ನೇತ್ರ ತಜ್ಞ ಸಮಾಜ ಸೇವಕ ಡಾ| ಕೃಷ್ಣ ಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ, ಉಡುಪಿ ಇವರಿಗೆ ನೀಡಲಾಗುವುದು ಎಂದು ಪ್ರತಿಷ್ಠಾನನ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ| ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುದ್ರುಮನೆ ಹಾಗೂ ಶ್ರೀ ವಿಜಯ ಪಾತ್ರೆಪಕರ್‌, ಮುಂಬೈ ಇವರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ ‘ಚಕ್ರವ್ಯೂಹ’ ಯಕ್ಷಗಾನವನ್ನು ಅವರ ಶಿಷ್ಯರು ಪ್ರಸ್ತುತ ಪಡಿಸಲಿದ್ದಾರೆ. ಮಾರ್ಚ್ 6, 7 ಮತ್ತು 8 ರಂದು ತಿಂಗಳೆಯ ಧರ್ಮದೇವತೆಗಳ ನೇಮೋತ್ಸವ ನೆರವೇರಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಿರಣ್ ಕುಮಾರ್ ಬೈಲೂರು,ಮುರಳಿ ಕಡೆಕಾರ್, ಬನ್ನಂಜೆ ಸಂಜೀವ ಸುವರ್ಣ,ಡಾ.ಪ್ರಶಾಂತ್ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago