Featured

ಉಡುಪಿ:  ಮಾರ್ಚ್ 8 ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – vishwanews24

ಉಡುಪಿ:  ಮಾರ್ಚ್8ರಂದು ತಿಂಗಳೆಗೆ ಸಾವಂತವಾಡಿ ಮಹಾರಾಜರು: ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಹೆಬ್ರಿ ತಾಲೂಕಿನ ನಾಡಾಲು ಗ್ರಾಮದ ತಿಂಗಳೆಯಲ್ಲಿ, ತಿಂಗಳೆ ಪ್ರತಿಷ್ಠಾನದಿಂದ ವರ್ಷಂಪ್ರತಿ ಜರಗುವ ಸಾಹಿತ್ಯೋತ್ಸಕ್ಕೆ ಈ ಬಾರಿ ಮಾರ್ಚ್ 8ರಂದು ಸಂಜೆ ಸಾವಂತವಾಡಿ ಸಿಂಧೂದುರ್ಗಾ ಸಂಸ್ಥಾನದ ಘನವೆತ್ತ ರಾಜ ಬಹದ್ದೂರು ಕೇಮ್ ಸಾವಂತ್ ಭೋಸ್ಥೆಯವರು ಭಾಗವಹಿಸಲಿದ್ದಾರೆ

ಅಂದು ಸಂಜೆ 6.00 ರಿಂದ ನಡೆಯುವ 64ನೇಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕದ ಅಪ್ರತಿಮ ಚಿಂತಕಿ ಖ್ಯಾತ ವಾಗ್ನಿಗಳಾದ ಡಾ। ವೀಣಾ ಬನ್ನಂಜೆಯವರು ಅನುಭವ ಮಂಟಪ ಎನ್ನುವ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಯುವ ವಾಗ್ನಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಇವರು ಇತಿಹಾಸದ ಪುಟಗಳಲ್ಲಿ ಸಾವಂತವಾಡಿ ಎನ್ನುವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ.

ತಿಂಗಳೆ ಪ್ರತಿಷ್ಠಾನದಿಂದ ನೀಡಲ್ಪಡುವ ಪ್ರತಿಷ್ಠಿತ ತಿಂಗಳೆ ಪ್ರಶಸ್ತಿಯನ್ನು ಈ ಬಾರಿ ಖ್ಯಾತ ನೇತ್ರ ತಜ್ಞ ಸಮಾಜ ಸೇವಕ ಡಾ| ಕೃಷ್ಣ ಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ, ಉಡುಪಿ ಇವರಿಗೆ ನೀಡಲಾಗುವುದು ಎಂದು ಪ್ರತಿಷ್ಠಾನನ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ| ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುದ್ರುಮನೆ ಹಾಗೂ ಶ್ರೀ ವಿಜಯ ಪಾತ್ರೆಪಕರ್‌, ಮುಂಬೈ ಇವರು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಗುರು ಬನ್ನಂಜೆ ಸಂಜೀವ ಸುವರ್ಣರ ನಿರ್ದೇಶನದಲ್ಲಿ ‘ಚಕ್ರವ್ಯೂಹ’ ಯಕ್ಷಗಾನವನ್ನು ಅವರ ಶಿಷ್ಯರು ಪ್ರಸ್ತುತ ಪಡಿಸಲಿದ್ದಾರೆ. ಮಾರ್ಚ್ 6, 7 ಮತ್ತು 8 ರಂದು ತಿಂಗಳೆಯ ಧರ್ಮದೇವತೆಗಳ ನೇಮೋತ್ಸವ ನೆರವೇರಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಿರಣ್ ಕುಮಾರ್ ಬೈಲೂರು,ಮುರಳಿ ಕಡೆಕಾರ್, ಬನ್ನಂಜೆ ಸಂಜೀವ ಸುವರ್ಣ,ಡಾ.ಪ್ರಶಾಂತ್ ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago