ಉಡುಪಿ : ಪವಿತ್ರ ರಮಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾರ್ಚ್ 2ರಿಂದ ರಾಜ್ಯಾದ್ಯಂತ ಉಪವಾಸ ವ್ರತ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಚಂದ್ರ ದರ್ಶನ ಸಮಿತಿಯ ಸಂಚಾಲಕ ಮೌಲಾನಾ ಮನ್ಸೂದ್ ಇಮ್ರಾನ್ ರಶಾದಿ ಹೇಳಿದ್ದಾರೆ.
ಶುಕ್ರವಾರ ಸಂಜೆ ರಾಜ್ಯ ವಕ್ಸ್ ಬೋರ್ಡ್ನ ಕೇಂದ್ರ ಕಚೇರಿ(ದಾರುಲ್ ಔಕಾಫ್)ಯಲ್ಲಿ ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ರಾಜ್ಯಗಳಲ್ಲಿ ಚಂದ್ರ ದರ್ಶನದ ಬಗ್ಗೆ ಲಭ್ಯವಾದ ಮಾಹಿತಿ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಆಂಧ್ರಪ್ರದೇಶ, ಬಿಹಾರ, ಉತ್ತರಪ್ರದೇಶ, ತಮಿಳುನಾಡು, ಉತ್ತರಾಖಂಡ, ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳು ಹಾಗೂ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಮಾಹಿತಿಗಳನ್ನು ತರಿಸಿಕೊಳ್ಳಲಾಗಿತ್ತು. ಎಲ್ಲಿಯೂ ಚಂದ್ರದರ್ಶನವಾದ ಮಾಹಿತಿ ಇಲ್ಲ. ಆದುದರಿಂದ, ಶನಿವಾರದಿಂದ ತರಾವೀಹ್ ನಮಾಝ್ ಹಾಗೂ ರವಿವಾರ ಮೊದಲ ಉಪವಾಸ ಆಚರಿಸಲಾಗುವುದು ಎಂದು ಮನ್ಸೂದ್ ಇಮ್ರಾನ್ ತಿಳಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…