Featured

ಉಡುಪಿ : ಮಾ.20ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ.ಸುಶೀಲಾ ಉಪಾಧ್ಯಾಯ ಸಂಸ್ಮರಣೆ -Vishwanews24

ಉಡುಪಿ : ಮಾ.20ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ.ಸುಶೀಲಾ ಉಪಾಧ್ಯಾಯ ಸಂಸ್ಮರಣೆ

ಉಡುಪಿ,: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೋಟ ಡಾ.ಕಾರಂತ ಪ್ರತಿಷ್ಠಾನದ ಸಹಕಾರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬ್ಯಾರಿ ಭಾಷಿಕರ ವರ್ಣನಾತ್ಮಕ ವ್ಯಾಕರಣ ಮತ್ತು ತೌಲನಕ ಅಧ್ಯಯನ ಗ್ರಂಥ ರಚಿಸಿ ಪಿಎಚ್‌ಡಿ ಪಡೆದ ಹಾಗೂ ಅಕಾಡೆಮಿಯ ಪ್ರಥಮ ಅವಧಿಯ ಸದಸ್ಯರು ಆಗಿದ್ದ ಡಾ.ಪಿ.ಸುಶೀಲ ಉಪಾಧ್ಯಾಯರವರ ಸಂಸ್ಮರಣಾ ಕಾರ್ಯಕ್ರಮವು ಮಾ.20ರಂದು ಅಪರಾಹ್ನ 2ಗಂಟೆಗೆ ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯಲಿದೆ

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಸಹಾಯಕ ಅಭಿಯೋಗ ನಿರ್ದೇಶಕಿ ಮಮ್ತಾಝ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿರುವರು. ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಸುಶೀಲ ಉಪಾಧ್ಯಾಯರವರ ಸಂಸ್ಮರಣ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಪಂ ಅಧ್ಯಕ್ಷೆ ಅಶ್ವಿನಿ ದಿನೇಶ್, ಡಾ. ಕಾರಂತ ಪ್ರತಿಷ್ಠಾನದ ಟ್ರಸ್ಟಿ ಇಬ್ರಾಹಿಂ ಕೋಟ, ಕಾರ್ಯದರ್ಶಿ ನರೇಂದ್ರ ಕೋಟ, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು ಭಾಗವಹಿಸಲಿರುವರು.

ಇದನ್ನೂ ಓದಿ : ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24

ಸಂಜೆ 4 ಗಂಟೆಗೆ ಮಹಿಳಾ ಸಾಧಕಿಯರಾದ ಮಮ್ತಾಜ್(ಸಾಮಾಜಿಕ ಸ್ಪಂದನೆ), ಡಾ.ವಾರಿಜ ಎನ್.(ಶೈಕ್ಷಣಿಕ ಕ್ಷೇತ್ರ), ಸುಶೀಲ ಸೋಮಶೇಖರ್ (ಸಂಘಟನೆ), ಡಾ.ಫಿರ್ದೋಸ್(ಶೈಕ್ಷಣಿಕ ಕ್ಷೇತ್ರ), ಡಾ.ಅಪ್ಸರಿ ಬಾನು ಎಂ. (ವೈದ್ಯಕೀಯ ಕ್ಷೇತ್ರ), ಮೀನಾ ಪಿಂಟೊ ಕಲ್ಯಾಣಪುರ(ಸಮಾಜ ಸೇವೆ), ಫರ್ಝಾನ ಎಂ.(ಸಾಮಾಜಿಕ ಸ್ಪಂದನೆ), ಲಲಿತಾ ಪೂಜಾರಿ ಕೊರವಡಿ (ಕರಕುಶಲ ಕಲೆ), ಸುಜಾತಾ ಅಂದ್ರಾದೆ(ಸಿನಿಮಾ, ರಂಗಭೂಮಿ ನಟಿ), ಶೈಲಾ ಎಸ್.ಪೂಜಾರಿ(ಸಾಮಾಜಿಕ ಸ್ಪಂದನೆ), ಮಂಜುಶ್ರೀ ರಾಕೇಶ್ ಕಟಪಾಡಿ (ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಸೇವೆ) ಅವರಿಗೆ ಅಭಿನಂದನಾ ಸಮಾರಂಭ ವನ್ನು ಆಯೋಜಿಸಲಾಗಿದೆ.

ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಾಧಕಿಯರನ್ನು ಸನ್ಮಾನಿಸಲಿರುವರು. ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ.ಕುಂದರ್ ಬಹು ಮಾನ ವಿತರಣೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಜಿಲ್ಲಾ ಮಟ್ಟದ ಮೆಹಂದಿ ಸ್ಪರ್ಧೆ ಮತ್ತು ಸಂಗೀತ ಕುರ್ಚಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬಳಿಕ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

ಮೆಹಂದಿ ಸ್ಪರ್ಧೆಯು ಅರಬಿಕ್ ಮತ್ತು ಭಾರತೀಯ ಶೈಲಿ ಎರಡು ವಿಭಾಗದಲ್ಲಿ ನಡೆಯಲಿದೆ. ಈ ಸ್ಪರ್ಧಾ ವಿಜೇತರಿಗೆ ಪ್ರತ್ಯೇಕವಾಗಿ ಪ್ರಥಮ 3,000 ರೂ., ದ್ವಿತೀಯ 2,000ರೂ., ತೃತೀಯ 1,000ರೂ. ಹಾಗೂ ನಾಲ್ಕು ಮಂದಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಸಂಗೀತ ಕುರ್ಚಿ ಸ್ಪರ್ಧೆಯಲ್ಲಿ ಪ್ರಥಮ 1,000ರೂ., ದ್ವಿತೀಯ 500ರೂ. ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವವರು ಮಾ.19ರೊಳಗೆ ದೂರವಾಣಿ ಸಂಖ್ಯೆ 7829729340, 7483946578 ನೊಂದಾವಣೆ ಮಾಡಿಕೊಳ್ಳಬೇಕು. ಕಾರ್ಯಕ್ರಮವನ್ನು ಅಕಾಡೆಮಿ ಮತ್ತು ಥೀಂ ಪಾಕ್‌ನ ಯೂಟುಬ್ ಚಾನಲ್ ಹಾಗೂ ಫೇಸ್ಬುಕ್ನಲ್ಲಿ ನೇರ ಪ್ರಸಾರ ಮಾಡಲಾಗು ವುದು ಎಂದು ಪೂರ್ಣಿಮ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ : ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

7 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

9 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

9 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

9 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

9 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

9 hours ago