ಉಡುಪಿ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್, ಸಣ್ಣ ಕೈಗಾರಿಕಾ ಸಂಘ, ಉಡುಪಿ ಐ.ಎಮ್.ಸಿ, ಕೈಗಾರಿಕಾ ತರಬೇತಿ ಸಂಸ್ಥೆ, ಡಾ|| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಡುಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಮಾರ್ಚ್ 29 ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ ಹಾಗೂ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಡಿಪ್ಲೋಮಾ, ಐ.ಟಿ.ಐ, ಸ್ನಾತ್ತಕೋತ್ತರ ಹಾಗೂ ವಿವಿಧ ವಲಯಕ್ಕೆ ಸಂಬoಧಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳು ವಿದ್ಯಾರ್ಹತೆ ಅಂಕಪಟ್ಟಿ, ಕನಿಷ್ಠ ಮೂರು ರೆಸ್ಯೂಮ್ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹಾಜರಾಗಬಹುದಾಗಿದೆ.
ಆನ್ಲೈನ್ ನೋಂದಣಿಗಾಗಿ http://udupi.nic.in ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9739691294, 9449943882, 9901481729 ಮತ್ತು 9743278151 ಅನ್ನು ಸಂಪರ್ಕಿಸುವoತೆ ಜಿಲ್ಲಾ ಕೌಶಲ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…