Featured

ಉಡುಪಿ: ಮಾ.4ರಂದು ಬೃಹತ್ ಉದ್ಯೋಗ ಮೇಳ – vishwanews24

ಉಡುಪಿ:  ಮಾ.4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ

ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಾ.4 ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರಿಂಗ್ ಪದವಿಧರರು ಇದರ ಪ್ರಯೋಜನವನ್ನು ಪಡೆಯಿರಿ 56 ಕಂಪೆನಿಗಳು ಆಗಮಿಸಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು ಎಂದು ತಿಳಿಸಿದರು.

ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಪ್ರಾಂಶುಪಾಲ ರೂಪೇಶ್ ಕುಮಾರ್ ಮಾತನಾಡಿ, ಪಾಸ್ ಹಾಗು ಫೇಲ್ ಆದವರಿಗೂ ಭಾಗವಹಿಸುವ ಅವಕಾಶ ಇದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಮಾ.4 ರಂದು ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಈಗಾಗಲೇ 600 ಕ್ಕೂ ಅಧಿಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಣಿ ಮಾಡಿಸಿದ್ದಾರೆ. ಕಳೆದ ಬಾರಿಯ ಉದ್ಯೋಗ ಮೇಳದಲ್ಲಿ 170 ಅಭ್ಯರ್ಥಿಗಳಿಗೆ ಉತ್ತಮ ಕಂಪೆನಿಯಲ್ಲಿ ಉದ್ಯೋಗ ಲಭಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

18 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

18 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

19 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

19 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

21 hours ago