Featured

ಉಡುಪಿ: ಮಾ.4ರಂದು ಬೃಹತ್ ಉದ್ಯೋಗ ಮೇಳ – vishwanews24

ಉಡುಪಿ:  ಮಾ.4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ

ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಾ.4 ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರಿಂಗ್ ಪದವಿಧರರು ಇದರ ಪ್ರಯೋಜನವನ್ನು ಪಡೆಯಿರಿ 56 ಕಂಪೆನಿಗಳು ಆಗಮಿಸಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು ಎಂದು ತಿಳಿಸಿದರು.

ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಪ್ರಾಂಶುಪಾಲ ರೂಪೇಶ್ ಕುಮಾರ್ ಮಾತನಾಡಿ, ಪಾಸ್ ಹಾಗು ಫೇಲ್ ಆದವರಿಗೂ ಭಾಗವಹಿಸುವ ಅವಕಾಶ ಇದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಮಾ.4 ರಂದು ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಈಗಾಗಲೇ 600 ಕ್ಕೂ ಅಧಿಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಣಿ ಮಾಡಿಸಿದ್ದಾರೆ. ಕಳೆದ ಬಾರಿಯ ಉದ್ಯೋಗ ಮೇಳದಲ್ಲಿ 170 ಅಭ್ಯರ್ಥಿಗಳಿಗೆ ಉತ್ತಮ ಕಂಪೆನಿಯಲ್ಲಿ ಉದ್ಯೋಗ ಲಭಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

11 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago