Featured

ಉಡುಪಿ: ಮಾ.4ರಂದು ಬೃಹತ್ ಉದ್ಯೋಗ ಮೇಳ – vishwanews24

ಉಡುಪಿ:  ಮಾ.4 ರಂದು ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ

ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಾ.4 ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರಿಂಗ್ ಪದವಿಧರರು ಇದರ ಪ್ರಯೋಜನವನ್ನು ಪಡೆಯಿರಿ 56 ಕಂಪೆನಿಗಳು ಆಗಮಿಸಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು ಎಂದು ತಿಳಿಸಿದರು.

ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಪ್ರಾಂಶುಪಾಲ ರೂಪೇಶ್ ಕುಮಾರ್ ಮಾತನಾಡಿ, ಪಾಸ್ ಹಾಗು ಫೇಲ್ ಆದವರಿಗೂ ಭಾಗವಹಿಸುವ ಅವಕಾಶ ಇದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಮಾ.4 ರಂದು ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಈಗಾಗಲೇ 600 ಕ್ಕೂ ಅಧಿಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಣಿ ಮಾಡಿಸಿದ್ದಾರೆ. ಕಳೆದ ಬಾರಿಯ ಉದ್ಯೋಗ ಮೇಳದಲ್ಲಿ 170 ಅಭ್ಯರ್ಥಿಗಳಿಗೆ ಉತ್ತಮ ಕಂಪೆನಿಯಲ್ಲಿ ಉದ್ಯೋಗ ಲಭಿಸಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಉಪಸ್ಥಿತರಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

2 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

2 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

3 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

3 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago