Featured

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ – vishwanews24

ಉಡುಪಿ : ಮೀನುಗಾರರಿಗೆ ಎನ್.ಎಫ್.ಡಿ.ಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಉಡುಪಿ : ಅಸಂಘಟಿತ ವಲಯವಾದ ಮೀನುಗಾರಿಕೆ ವಲಯವನ್ನು ಸಂಘಟಿತ ವಲಯವಾಗಿ ರೂಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ-ಮತ್ಸ್ಯ ಕಿಸಾನ್ ಸಮೃದ್ಧಿ ಸಹ ಯೋಜನೆಯಡಿ ಮೀನುಗಾರರು, ಮೀನು ಕೃಷಿಕರು, ಮೀನು ಕಾರ್ಮಿಕರು, ಮೀನು ಮಾರಾಟಗಾರರು, ಮೀನು ಸಾಗಾಣಿಕೆ ಮಾಡುವವರು, ಮೀನು ಸಂಸ್ಕರಣಾ ಘಟಕಗಳು, ಮೀನು ಆಧಾರಿತ ಸೂಕ್ಷ್ಮ ಅಥವಾ ಸಣ್ಣ ಉದ್ಯಮಗಳು, ಐಸ್ ಪೂರೈಕೆದಾರರು ಹಾಗೂ ಮೀನುಗಾರಿಕೆ ವಲಯಕ್ಕೆ ಸಂಬ0ಧಿಸಿದ ಇತರೆ ಚಟುವಟಿಕೆಗಳಲ್ಲಿ ನಿರತರಾದ ಪ್ರತಿಯೋರ್ವರೂ ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೇರವಾಗಿ ಅಥವಾ ಮೀನುಗಾರಿಕೆ ಸಹಕಾರಿ ಸಂಘಗಳ ಮೂಲಕ ಅಥವಾ ಸಾಮಾನ್ಯ ಸೇವಾ ಕೇಂದ್ರದ (ಅSಅ) ಮೂಲಕ ಶುಲ್ಕ ರಹಿತವಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನ್ಯಾಶನಲ್ ಫಿಶರೀಸ್ ಡಿಜಿಟಲ್ ಪ್ಲಾಟ್ ಫಾರ್ಮ್ (ಓಈಆP) ಪೋರ್ಟಲ್ ನಲ್ಲಿ ನೋಂದಾಯಿಸಲು ಹೆಚ್ಚುವರಿ ಶುಲ್ಕ ವಿಧಿಸುವ/ ವಿಧಿಸಿರುವ/ ವಿಧಿಸುತ್ತಿರುವ ಮೀನುಗಾರಿಕೆ ಸಹಕಾರಿ ಸಂಘಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳ ಮೇಲೆ ಉಡುಪಿ, ಕುಂದಾಪುರ ಮತ್ತು ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರುಗಳ ಕಾನೂನು ಕ್ರಮ ಜರುಗಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago