Featured

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಉಡುಪಿ: ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರಯುತವಾಗಿ ಬೆಳೆದು ಬಂದವ. ಸಮಸ್ಯೆ ಅರಿತು ಸಚಿವರು ಸರ್ಕಾರಕ್ಕೆ ಸಹಕಾರ ಕೊಡಬೇಕು ಎಂದು ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ ಕಿವಿಮಾತು ಹೇಳಿದ್ದಾರೆ.

ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಆರು ಅವಧಿಗೆ ಜನ ಗೆಲ್ಲಿಸಿದರು. ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಹೀಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದರು.

ಇದನ್ನೂ ಓದಿ : ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಶ್ರಮಿಸಿ ಸರ್ಕಾರ ಯಶಸ್ವಿಯಾಗಿದೆ : ರಾಜ್ಯಪಾಲ ವಜುಭಾಯಿ​​​ ವಾಲಾ -Vishwanews24

ಸರ್ಕಾರದ ಒಳಗಿರುವ ಎಲ್ಲರಿಗೂ ಒಂದೇ ರೀತಿ ಆಲೋಚನೆ ಇರಬೇಕು. ನಮ್ಮ ಆಲೋಚನೆಯಲ್ಲಿ ವ್ಯತ್ಯಾಸ ಆದರೆ ರಾಜ್ಯಕ್ಕೆ ಸಮಸ್ಯೆ ಬರುತ್ತದೆ. ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ ಎಂದು ಅಸಮಾಧಾನಿತ ಸಚಿವರಿಗೆ ಅಂಗಾರ ಚಿವುಟಿದರು.

ಈಗಷ್ಟೇ ಮೀನುಗಾರಿಕೆ ಬಂದರು ಒಳನಾಡು ಖಾತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಕೆಲದಿನಗಳ ಕಾಲ ಕಾರ್ಯವ್ಯಾಪ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೇನೆ. ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ. ಬಂದರು ಮೀನುಗಾರರ ಕುಟುಂಬ ಸಮುದ್ರತೀರಕ್ಕೆ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಅನುಭವವನ್ನು ಪಡೆದುಕೊಳ್ಳುತ್ತೇನೆ ಎಂದು ಈ ಸಂದರ್ಭದಲ್ಲಿ ಸಚಿವ ಅಂಗಾರ ಹೇಳಿದರು

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

13 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

13 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

13 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

14 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

14 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

15 hours ago