Featured

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಉಡುಪಿ: ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರಯುತವಾಗಿ ಬೆಳೆದು ಬಂದವ. ಸಮಸ್ಯೆ ಅರಿತು ಸಚಿವರು ಸರ್ಕಾರಕ್ಕೆ ಸಹಕಾರ ಕೊಡಬೇಕು ಎಂದು ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ ಕಿವಿಮಾತು ಹೇಳಿದ್ದಾರೆ.

ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಆರು ಅವಧಿಗೆ ಜನ ಗೆಲ್ಲಿಸಿದರು. ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಹೀಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದರು.

ಇದನ್ನೂ ಓದಿ : ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಶ್ರಮಿಸಿ ಸರ್ಕಾರ ಯಶಸ್ವಿಯಾಗಿದೆ : ರಾಜ್ಯಪಾಲ ವಜುಭಾಯಿ​​​ ವಾಲಾ -Vishwanews24

ಸರ್ಕಾರದ ಒಳಗಿರುವ ಎಲ್ಲರಿಗೂ ಒಂದೇ ರೀತಿ ಆಲೋಚನೆ ಇರಬೇಕು. ನಮ್ಮ ಆಲೋಚನೆಯಲ್ಲಿ ವ್ಯತ್ಯಾಸ ಆದರೆ ರಾಜ್ಯಕ್ಕೆ ಸಮಸ್ಯೆ ಬರುತ್ತದೆ. ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ ಎಂದು ಅಸಮಾಧಾನಿತ ಸಚಿವರಿಗೆ ಅಂಗಾರ ಚಿವುಟಿದರು.

ಈಗಷ್ಟೇ ಮೀನುಗಾರಿಕೆ ಬಂದರು ಒಳನಾಡು ಖಾತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಕೆಲದಿನಗಳ ಕಾಲ ಕಾರ್ಯವ್ಯಾಪ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೇನೆ. ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ. ಬಂದರು ಮೀನುಗಾರರ ಕುಟುಂಬ ಸಮುದ್ರತೀರಕ್ಕೆ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಅನುಭವವನ್ನು ಪಡೆದುಕೊಳ್ಳುತ್ತೇನೆ ಎಂದು ಈ ಸಂದರ್ಭದಲ್ಲಿ ಸಚಿವ ಅಂಗಾರ ಹೇಳಿದರು

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

8 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

8 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

8 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

9 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

9 hours ago