ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ವಿಶೇಷ ಕ್ರಮ ವಹಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕ್ಯಾ| ಬ್ರಿಜೇಶ್ ಚೌಟ ನೇತೃತ್ವದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜತೆಗೂಡಿ ಹೊಸದಿಲ್ಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಹದೀiಪ್ ಸಿಂಗ್ ಪುರಿ ಹಾಗೂ ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಕರಾವಳಿ ಜಿಲ್ಲೆಯ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆ ಬೋಟ್ಗಳಿಗೆಡೀಸೆಲ್ ಕೊರತೆಯಿಂದ ಬಹುತೇಕ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಿದೆ. ಪರಿಸ್ಥಿತಿ ಹೀಗೆ ಮುಂದು ವರಿದರೆ ಮೀನುಗಾರಿಕೆಯನ್ನೇ ಅವಲಂಬಿಸಿರುವ ಲಕ್ಷಾಂತರ ಜನರ ಜನಜೀವ ನೋಪಾಯಕ್ಕೆ ಸಮಸ್ಯೆ ಯಾಗಲಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ:
ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವರು, ದೇಶದ ಡೀಸೆಲ್ ದಾಸ್ತಾನು ಪ್ರಮಾಣಕ್ಕೆ ಅನುಗುಣವಾಗಿ ಮೀನುಗಾರಿಕೆ ವಲಯಕ್ಕೆ ಅಗತ್ಯ ಪ್ರಮಾಣದ ನಿರಂತರ ಡೀಸೆಲ್ ಪೂರೈಕೆಗೆ ವಿಶೇಷ ಆದ್ಯತೆ ನೀಡಲು ಪ್ರಯತ್ನಿಸಲಾಗುವುದು ಎಂದರು.ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಕಟಪಾಡಿ ಅಂಡರ್ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್ ಮತ್ತು ವೆಹಿಕಲ್…
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…
ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…