ಉಡುಪಿ: ಕೆಪಿಸಿಸಿ ವತಿಯಿಂದ ಮಲ್ಪೆಯ ಮೀನುಗಾರ ಸಮುದಾಯಕ್ಕೆ ಇವತ್ತು ಆಂಬುಲೆನ್ಸ್ ಹಸ್ತಾಂತರ ಮಾಡಲಾಯಿತು.ಈ ಮೊದಲು ಡಿ.ಕೆ ಶಿವಕುಮಾರ್ ಮಲ್ಪೆಗೆ ಬಂದಾಗ ಮೀನುಗಾರ ಸಮುದಾಯದವರು ಆಂಬುಲೆನ್ಸ್ ನ ಬೇಡಿಕೆ ಇಟ್ಟಿದ್ದರು.ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಂಬುಲೆನ್ಸ್ ಕಳುಸಿಕೊಟ್ಟಿದ್ದು ಇವತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಭವನದ ಮುಂಭಾಗ ಆಂಬುಲೆನ್ಸ್ ನ ಕೀಯನ್ನು ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಪ್ರಮೋದ್ ಮಧ್ವರಾಜ್ ,ಮಲ್ಪೆ ಬಂದರಿನಲ್ಲಿ ಸಾವಿರಾರು ಬೋಟ್ ಗಳಿವೆ,ಸಾವಿರಾರು ಮೀನುಗಾರರಿದ್ದಾರೆ.ಅವಘಡಗಳಾದಾಗ ,ಯಾರಾದರೂ ನೀರಿಗೆ ಬಿದ್ದಾಗ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲೂ ವ್ಯವಸ್ಥೆಗಳಿರಲಿಲ್ಲ.ಇದನ್ನು ಮನಗಂಡು ಡಿ.ಕೆ ಶಿವಕುಮಾರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.ಗಣೇಶ ಚತುರ್ಥಿ ದಿನವೇ ಆಂಬುಲೆನ್ಸ್ ಹಸ್ತಾಂತರ ಮಾಡಿದ್ದೇವೆ.ಆಂಬುಲೆನ್ಸ್ ಉಪಯೋಗಿಸುವ ಪ್ರಸಂಗ ಬಾರದೇ ಇರಲಿ,ಅವಘಡಗಳು ಸಂಭವಿಸದಿರಲಿ ಎಂದು ಹಾರೈಸಿದರು.ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು,ರಮೇಶ್ ಕಾಂಚನ್ ,ಯತೀಶ್ ಕರ್ಕೇರಾ,ಪ್ರಖ್ಯಾತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…