ಉಡುಪಿ: ಕೆಪಿಸಿಸಿ ವತಿಯಿಂದ ಮಲ್ಪೆಯ ಮೀನುಗಾರ ಸಮುದಾಯಕ್ಕೆ ಇವತ್ತು ಆಂಬುಲೆನ್ಸ್ ಹಸ್ತಾಂತರ ಮಾಡಲಾಯಿತು.ಈ ಮೊದಲು ಡಿ.ಕೆ ಶಿವಕುಮಾರ್ ಮಲ್ಪೆಗೆ ಬಂದಾಗ ಮೀನುಗಾರ ಸಮುದಾಯದವರು ಆಂಬುಲೆನ್ಸ್ ನ ಬೇಡಿಕೆ ಇಟ್ಟಿದ್ದರು.ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಂಬುಲೆನ್ಸ್ ಕಳುಸಿಕೊಟ್ಟಿದ್ದು ಇವತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಭವನದ ಮುಂಭಾಗ ಆಂಬುಲೆನ್ಸ್ ನ ಕೀಯನ್ನು ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಪ್ರಮೋದ್ ಮಧ್ವರಾಜ್ ,ಮಲ್ಪೆ ಬಂದರಿನಲ್ಲಿ ಸಾವಿರಾರು ಬೋಟ್ ಗಳಿವೆ,ಸಾವಿರಾರು ಮೀನುಗಾರರಿದ್ದಾರೆ.ಅವಘಡಗಳಾದಾಗ ,ಯಾರಾದರೂ ನೀರಿಗೆ ಬಿದ್ದಾಗ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲೂ ವ್ಯವಸ್ಥೆಗಳಿರಲಿಲ್ಲ.ಇದನ್ನು ಮನಗಂಡು ಡಿ.ಕೆ ಶಿವಕುಮಾರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.ಗಣೇಶ ಚತುರ್ಥಿ ದಿನವೇ ಆಂಬುಲೆನ್ಸ್ ಹಸ್ತಾಂತರ ಮಾಡಿದ್ದೇವೆ.ಆಂಬುಲೆನ್ಸ್ ಉಪಯೋಗಿಸುವ ಪ್ರಸಂಗ ಬಾರದೇ ಇರಲಿ,ಅವಘಡಗಳು ಸಂಭವಿಸದಿರಲಿ ಎಂದು ಹಾರೈಸಿದರು.ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು,ರಮೇಶ್ ಕಾಂಚನ್ ,ಯತೀಶ್ ಕರ್ಕೇರಾ,ಪ್ರಖ್ಯಾತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…