ಉಡುಪಿ: ಮೀನುಗಾರರೊಂದಿಗೆ ಸಂವಾದಕ್ಕಾಗಿ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಭೇಟಿಯ ವೇಳೆ ನಾನು ಕೈಯಲ್ಲಿ ಮೀನು ಮುಟ್ಟಿದ್ದೇನೆ ಆದ್ದರಿಂದ ದೇವಸ್ಥಾನದ ಒಳಗೆ ಬರಬಹುದೇ ಎಂದು ಪ್ರಶ್ನಿಸಿದ ಘಟನೆ ಗುರುವಾರ ನಡೆಯಿತು.
ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಂವಾದದ ವೇಳೆ ರಾಹುಲ್ ಗಾಂಧಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ದೊಡ್ಡ ಗಾತ್ರದ ಅಂಜಲ್ ಮೀನೊಂದನ್ನು ಗಿಫ್ಟ್ ಆಗಿ ಕೊಟ್ಟಿತ್ತು. ಈ ಮೀನನ್ನು ಎತ್ತಿ ಖುಷಿ ಪಟ್ಟ ರಾಹುಲ್ ಮೀನುಗಾರ ಮಹಿಳೆಯ ಜೊತೆ ಆತ್ಮೀಯವಾಗಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದರು.
ಇದಾದ ಬಳಿಕ ನೇರ ಮಹಾಲಕ್ಷ್ಮಿ ದೇಗುಲಕ್ಕೆ ರಾಹುಲ್ ಗಾಂಧಿ ಬಂದಿದ್ದಾರೆ. ಈ ವೇಳೆ ಮೀನನ್ನು ಕೈಯಲ್ಲಿ ಹಿಡಿದಿದ್ದ ರಾಹುಲ್ ನಾನಿನ್ನು ಕೈ ತೊಳೆದಿಲ್ಲ ಎಂದು ನೀರಿಗಾಗಿ ಹುಡುಕಾಡಿದರು. ದೇವಸ್ಥಾನದ ಒಳಗೆ ಬರಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ. ಸುತ್ತಮುತ್ತ ಇದ್ದ ಕಾಂಗ್ರೆಸ್ ನಾಯಕರು ಮೊಗವೀರ ಮುಖಂಡರು ಯಾವುದೇ ಅಭ್ಯಂತರ ಇಲ್ಲ ತಾವು ಒಳಗೆ ಬನ್ನಿ ಎಂದಿದ್ದಾರೆ. ನಂತರ ಜೊತೆಗಿದ್ದವರು ದೇಗುಲದ ಒಳಗೆ ಕರೆದುಕೊಂಡು ಹೋಗಿದ್ದಾರೆ. ಗರ್ಭಗುಡಿಯ ಪಕ್ಕ ತೆರಳದೇ, ಪ್ರಾಂಗಣದಲ್ಲೇ ನಿಂತು ವಿಶೇಷ ಪೂಜೆ ಸಲ್ಲಿಕೆ ಮಾಡಿದ ಅವರು, ಪ್ರಸಾದ ಸ್ವೀಕಾರ ಮಾಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…