ಉಡುಪಿ : ಮುಂದಿನ ದಿನಗಳಲ್ಲಿ ಸಾರ್ವಜಿನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ : ಯಶ್ಪಾಲ್ ಸುವರ್ಣ – Vishwanews24

Featured, ಉಡುಪಿ

ಹಿಜಾಬ್ ಕುರಿತ 6 ಹೋರಾಟಗಾರ್ತಿಯರು ಭಯೋತ್ಪಾದಕರು..

ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಮುಂದಿನ ದಿನ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು..

ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ ಹಿಜಾಬನ್ನು ಹೊರಗಡೆ ಹಾಕದೇ ಇರೋ ಪರಿಸ್ಥಿತಿ ಬರುತ್ತೆ..

ಉಡುಪಿ : ಮುಂದಿನ ದಿನಗಳಲ್ಲಿ ಸಾರ್ವಜಿನಿಕ ಸ್ಥಳಗಳಲ್ಲಿಯೂ ಹಿಜಾಬ್ ಹಾಕಲು ಬಿಡುವುದಿಲ್ಲ ಎಂದು ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಅವರು ಹೇಳಿಕೆ ನೀಡಿದ್ದಾರೆ.

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಕಾರಣ ಪರೀಕ್ಷೆಯನ್ನು ತ್ಯಜಿಸಿ ವಾಪಾಸ್ಸಾದ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಹಿಜಾಬ್ ಕುರಿತ 6 ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಎಚ್ಚರಗೊಂಡಿದ್ದಾರೆ. ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಮುಂದಿನ ದಿನ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು. ಹಾಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ. ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ ಹಿಜಾಬನ್ನು ಹೊರಗಡೆ ಹಾಕದೇ ಇರೋ ಪರಿಸ್ಥಿತಿ ಬರುತ್ತೆ ಎಂದು ಹೇಳಿದ್ದಾರೆ.

ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರಿಗೆ ಈ ಹಿಂದೆಯೇ ಅನೇಕ ಬಾರಿ ಮನವರಿಕೆ ಮಾಡಿದ್ದೇವೆ , ಮುಸ್ಲಿಂ ಧಾರ್ಮಿಕ ಮುಖಂಡರೂ ಶಿಕ್ಷಣದ ಮಹತ್ವದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಆದರೆ ಇವರು ಬುದ್ದಿ ಕಲಿಯಲಿಲ್ಲ ಎಂದರೆ ನಾವೇನು ಮಾಡುವುದಕ್ಕೆ ಆಗುತ್ತೆ ಎಂದಿದ್ದಾರೆ.

ಭಾರತವು ಯಾವುದೇ ದೇಶ ಅಥವಾ ಸಮಾಜಕ್ಕೆ ಎಂದಿಗೂ ಬೆದರಿಕೆಯೊಡ್ಡಿಲ್ಲ : ಪ್ರಧಾನಿ ಮೋದಿ – Vishwanews24

 

Leave a Reply