ಉಡುಪಿ : ಮುಂದಿನ ದಿನಗಳಲ್ಲಿ ಸಾರ್ವಜಿನಿಕ ಸ್ಥಳಗಳಲ್ಲಿಯೂ ಹಿಜಾಬ್ ಹಾಕಲು ಬಿಡುವುದಿಲ್ಲ ಎಂದು ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಅವರು ಹೇಳಿಕೆ ನೀಡಿದ್ದಾರೆ.
ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಕಾರಣ ಪರೀಕ್ಷೆಯನ್ನು ತ್ಯಜಿಸಿ ವಾಪಾಸ್ಸಾದ ವಿಚಾರಕ್ಕೆ ಸಂಬಂಧಿಸಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಹಿಜಾಬ್ ಕುರಿತ 6 ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಎಚ್ಚರಗೊಂಡಿದ್ದಾರೆ. ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಮುಂದಿನ ದಿನ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು. ಹಾಗಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲೂ ಹಿಜಾಬ್ ಹಾಕಲು ಬಿಡಲ್ಲ. ಶಾಲಾ ಕಾಲೇಜಿನಲ್ಲಿ ಮಾತ್ರವಲ್ಲ ಹಿಜಾಬನ್ನು ಹೊರಗಡೆ ಹಾಕದೇ ಇರೋ ಪರಿಸ್ಥಿತಿ ಬರುತ್ತೆ ಎಂದು ಹೇಳಿದ್ದಾರೆ.
ಹಿಜಾಬ್ ಹೋರಾಟದ ವಿದ್ಯಾರ್ಥಿನಿಯರಿಗೆ ಈ ಹಿಂದೆಯೇ ಅನೇಕ ಬಾರಿ ಮನವರಿಕೆ ಮಾಡಿದ್ದೇವೆ , ಮುಸ್ಲಿಂ ಧಾರ್ಮಿಕ ಮುಖಂಡರೂ ಶಿಕ್ಷಣದ ಮಹತ್ವದ ಬಗ್ಗೆ ತಿಳುವಳಿಕೆ ನೀಡಿದ್ದಾರೆ. ಆದರೆ ಇವರು ಬುದ್ದಿ ಕಲಿಯಲಿಲ್ಲ ಎಂದರೆ ನಾವೇನು ಮಾಡುವುದಕ್ಕೆ ಆಗುತ್ತೆ ಎಂದಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…