Featured

ಉಡುಪಿ : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ : ರೋಝಿ ಜೋನ್ – Vishwanews24

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ

ಎಲ್ಲರೂ ಹೋರಾಟ ನಡೆಸುವುದರ ಮೂಲಕ 40% ಸರಕಾರವನ್ನು ಕಿತ್ತೊಗೆಯಬೇಕಾಗಿದೆ..

ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ..

ಎಐಸಿಸಿ ಕಾರ್ಯದರ್ಶಿ ,ಮೈಸೂರು ಉಸ್ತುವಾರಿ, ಕೇರಳ ಶಾಸಕ ರೋಝಿ ಜೋನ್

ಉಡುಪಿ: ರಾಜ್ಯದಲ್ಲಿ ಆಡಳಿತ ನಡೆಸುವ 40% ಕಮೀಷನ್ ಸರಕಾರದಿಂದ ಜನರು ಬೇಸತ್ತಿದ್ದು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ, ಕೇರಳದ ಶಾಸಕರಾದ ರೋಝಿ ಜೋನ್ ಹೇಳಿದರು.

ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಠಾಚಾರದಲ್ಲಿ ಮುಳುಗಿದ್ದು ದೇಶದಲ್ಲಿಯೇ ಇತಿಹಾಸ ಸಾಧಿಸಿದೆ. ಜನರು ಬದಲಾವಣೆಯನ್ನು ಬಯಸಿದ್ದು, ಪ್ರಸ್ತುತ ಸರಕಾರದಿಂದ ಜನರು ಸಂಪೂರ್ಣ ತೊಂದರೆ ಅನುಭವಿಸುತ್ತಿದ್ದಾರೆ. ಸರಕಾರದ ಪ್ರತಿಯೊಬ್ಬ ಶಾಸಕರು ಹಣ ಮಾಡುವುದರಲ್ಲೇ ಮಗ್ನರಾಗಿದ್ದು, ರಾಹುಲ್ ಗಾಂಧಿಯವರು ನಡೆಸಿದ ಭಾರತ್ ಜೋಡೊ ಯಾತ್ರೆಯಲ್ಲಿ ಜನರು ಅಭೂತಪೂರ್ವವಾದ ಬೆಂಬಲ ಸೂಚಿಸಿದ್ದು ಮುಂದಿನ ಚುನಾವಣೆಗೆ ಇದು ಸಹಕಾರಿಯಾಗಲಿದೆ.

ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಳಿನ್‌ ಕುಮಾರ್‌ ಕಟೀಲ್‌ – Vishwanews24

ಕಾಂಗ್ರೆಸ್ ಪಕ್ಷ ಎಂದಿಗೂ ಕೂಡ ವಿಭಜನೆ ರಾಜಕೀಯಕ್ಕೆ ಬೆಂಬಲ ನೀಡುವುದಲ್ಲಿ ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುವುದರೊಂದಿಗೆ ಪ್ರತಿಯೊಬ್ಬರನ್ನು ಪ್ರೀತಿಸುವುದು ನಮ್ಮ ಉದ್ದೇಶ. ರಾಜ್ಯದ ಬಿಜೆಪಿ ಸರಕಾರ ಆಡಳಿತ ವಿರೋಧಿ ನೀತಿಯ ವಿರುದ್ದ ಎಲ್ಲರೂ ಹೋರಾಟ ನಡೆಸುವುದರ ಮೂಲಕ 40% ಸರಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದರು.

ಕಾಂಗ್ರೆಸ್ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿಕೊಂಡು ಅದರ ಆಶಯದಂತೆ ನಡೆಯುತ್ತಿದ್ದು ರಾಹುಲ್ ಗಾಂಧಿಯವರ ಭಾರತ್ ಜೋಡೊ ಮೂಲಕ ಈಗಾಗಲೇ ಕೊಟ್ಯಾಂತರ ಜನರ ನಡುವೆ ನಾವು ಸಾಗಿದ್ದೇವೆ. ದೇಶದಾದ್ಯತಂತ ಒಡೆದ ಮನಸ್ಸುಗಳನ್ನು ಸೌಹಾರ್ದತೆಯ ಮೂಲಕ ಕಟ್ಟುವ ಕೆಲಸ ಮಾಡುತ್ತಿದ್ದು ಎಲ್ಲಾ ರಾಜ್ಯಗಳಲ್ಲಿ ಅತ್ಯುತ್ತಮವಾದ ಬೆಂಬಲ ಸಿಗುತ್ತಿದೆ ಎಂದರು.

ರಾಷ್ಟ್ರೀಯ ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ. ಹಲವು ದಶಕಗಳ ಬಳಿಕ ಕರ್ನಾಟಕದವರು ಅಧ್ಯಕ್ಷರಾಗಿದ್ದಾರೆ. ಬ್ಲಾಕ್ ಮಟ್ಟದ ಅಧ್ಯಕ್ಷರಾಗಿದ್ದವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ. ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಯ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಯುವಕ ನೇಣುಬಿಗಿದು ಆತ್ಮಹತ್ಯೆ – Vishwanews24

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎ ಗಫೂರ್, ಕೆಪಿಸಿಸಿ ಸಂಯೋಜಕರಾದ ಹಬೀಬ್ ಆಲಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ನಾಯಕರಾದ ಮಲ್ಯಾಡಿ ಶಿವರಾಮ್ ಶೆಟ್ಟಿ, ಸಂತೋಷ್ ಕುಲಾಲ್, ಅಣ್ಣಯ್ಯ ಕುಲಾಲ್, ಭಾಸ್ಕರ್ ರಾವ್ ಕಿದಿಯೂರು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago