ಉಡುಪಿ:ಮುಂಬೈಯಿಂದ ಮಗಳ ಮದುವೆ ಕಾರ್ಯಕ್ಕೆಂದು ಬಂದ ವ್ಯಕ್ತಿಯೊಬ್ಬರು ಹೊಟೇಲಿನಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಮೇ 21ರಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು ಮೃತ ವ್ಯಕ್ತಿಯನ್ನು ದೊಂಬಿವಿಲಿಯ ರಾಮಕೃಷ್ಣ ಮುದ್ದು ಶೆಟ್ಟಿ (68) ಎಂದು ಗುರುತಿಸಲಾಗಿದೆ.
ಮೇ22ಕ್ಕೆ ಇವರ ಎರಡನೇ ಮಗಳಿಗೆ ಉಡುಪಿ ಶ್ಯಾಮಿಲಿ ಸಭಾಭವನದಲ್ಲಿ ಮದುವೆ ನಿಶ್ಚಯವಾಗಿದ್ದು, ಈ ಸಂದರ್ಭದಲ್ಲಿ ಮೇ19ರಂದು ಇಡೀ ಕುಟುಂಬ ಸಮೇತರಾಗಿ ಬಂದು ಉಡುಪಿಯ ಹೊಟೋಲ್ನಲ್ಲಿ ಉಳಿದಿದ್ದರು, ಹೊಟೇಲ್ ರೂಮ್ ಒಳಗಡೆ ನಡೆಯುವಾಗ ಆಕಸ್ಮಿಕವಾಗಿ ತುಂಡಾದ ಕಾಲಿಗೆ ಅಳವಡಿಸಿದ ಬೆಲ್ಟ್ ಜಾರಿ ನೆಲಕ್ಕೆ ಬಿದ್ದಿದರಿಂದ ತಲೆಗೆ ತೀವ್ರವಾಗಿ ಗಾಯಗೊಂಡ ಇವರು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…