ಉಡುಪಿ: ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ
ಅಧಿಕಾರ ಸ್ವೀಕರಿಸಿದ ಮೊದಲ ಸಚಿವ ಸಂಪುಟದಲ್ಲಿ ತೆಗೆದುಕೊಂಡ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ಮಾಸಾಶನ ರೂ.1000ದಿಂದ ರೂ.1200ಕ್ಕೆ ಹೆಚ್ಚಳವಾಗಿದ್ದು, 35.98 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ. ಮಾಸಿಕ ವಿಧವಾ ವೇತನ ರೂ.600ರಿಂದ ರೂ.800ಕ್ಕೆ ಹೆಚ್ಚಳವಾಗಲಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ದಿವ್ಯಾಂಗರ ಮಾಸಿಕ ವೇತನ ರೂ.600 ಗಳಿಂದ ರೂ.800ಕ್ಕೆ ಹೆಚ್ಚಳವಾಗಳಿದ್ದು, 3.66 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ.
ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಬಡವರ, ದೀನದಲಿತರ, ರೈತರ ಮಕ್ಕಳ ಶ್ರೇಯೋಭಿವೃದ್ಧಿಯ ಚಿಂತನೆಯಿಂದ ಜಾರಿಗೆ ತರಲಿರುವ ವಿವಿಧ ಜನಕಲ್ಯಾಣ ಯೋಜನೆಗಳಿಗೆ ನಾಂದಿ ಹಾಡಿರುವುದು ಶ್ಲಾಘನೀಯ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…