ಉಡುಪಿ: ಕರ್ನಾಟಕ ಸರಕಾರದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಯವರಿಗೆ ಉಡುಪಿ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ
ಅಧಿಕಾರ ಸ್ವೀಕರಿಸಿದ ಮೊದಲ ಸಚಿವ ಸಂಪುಟದಲ್ಲಿ ತೆಗೆದುಕೊಂಡ ಜನಪರ ನಿರ್ಣಯ ಜನ ಸಾಮಾನ್ಯರ ಜೊತೆಗೆ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮೊತ್ತಮೊದಲ ನಿರ್ಣಯದಂತೆ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ರೂ.1000 ಕೋಟಿ ಹೆಚ್ಚುವರಿ ವೆಚ್ಚದ ನೂತನ ಶಿಷ್ಯ ವೇತನ ಯೋಜನೆ ಜಾರಿಯಾಗಲಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ಮಾಸಾಶನ ರೂ.1000ದಿಂದ ರೂ.1200ಕ್ಕೆ ಹೆಚ್ಚಳವಾಗಿದ್ದು, 35.98 ಲಕ್ಷ ಫಲಾನುಭವಿಗಳಿಗೆ ಲಾಭವಾಗಲಿದೆ. ಮಾಸಿಕ ವಿಧವಾ ವೇತನ ರೂ.600ರಿಂದ ರೂ.800ಕ್ಕೆ ಹೆಚ್ಚಳವಾಗಲಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ. ದಿವ್ಯಾಂಗರ ಮಾಸಿಕ ವೇತನ ರೂ.600 ಗಳಿಂದ ರೂ.800ಕ್ಕೆ ಹೆಚ್ಚಳವಾಗಳಿದ್ದು, 3.66 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ.
ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರ ಬಡವರ, ದೀನದಲಿತರ, ರೈತರ ಮಕ್ಕಳ ಶ್ರೇಯೋಭಿವೃದ್ಧಿಯ ಚಿಂತನೆಯಿಂದ ಜಾರಿಗೆ ತರಲಿರುವ ವಿವಿಧ ಜನಕಲ್ಯಾಣ ಯೋಜನೆಗಳಿಗೆ ನಾಂದಿ ಹಾಡಿರುವುದು ಶ್ಲಾಘನೀಯ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…