ಉಡುಪಿ : ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆಗೆ ಅವಕಾಶವಿಲ್ಲ ಎಂಬ ಆದೇಶವನ್ನು ವಾಪಸ್ ಪಡೆಯುವುದಾಗಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾಗಿ ಉಡುಪಿ ಶಾಸಕ ಕೆ . ರಘುಪತಿ ಭಟ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸಚಿವೆಯನ್ನು ಭೇಟಿ ಮಾಡಿದ ಶಾಸಕರು, ಮಾಧ್ವ ಸಮುದಾಯದಲ್ಲಿ ಈ ಆದೇಶದ ಬಗ್ಗೆ ವ್ಯಕ್ತ ಗೊಂಡಿರುವ ಆಕ್ರೋಶದ ಬಗ್ಗೆ ಮನವರಿಕೆ ಮಾಡಿದ್ದರು. ಇದು ಮಾಹಿತಿ ಕೊರತೆಯಿಂದ ಆಗಿರುವ ಆದೇಶ.
ಈ ಬಗ್ಗೆ ಸಚಿವರಿಗೆ ಪೂರ್ಣ ಮಾಹಿತಿ ನೀಡಿರುವುದರಿಂದ ಆದೇಶ ವಾಪಾಸು ಪಡೆಯುವ ಭರವಸೆ ನೀಡಿದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದು ಶಾಸಕ ಭಟ್ ಹೇಳಿದ್ದಾರೆ. ಈ ವಿಚಾರ ಸಂಬಂಧ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಶಾಸಕರ ಮೂಲಕ ಮೊಬೈಲ್ ನಲ್ಲಿ ಸಚಿವೆ ಜೊತೆ ಮಾತನಾಡಿದ್ದರು. ಈ ಆದೇಶದಿಂದ ಮಾಧ್ವ ತತ್ವ ಅನುಯಾಯಿಗಳಿಗೆ ಆಗಿರುವ, ನೋವನ್ನು ತಿಳಿಸಿದ್ದರು.
ಪಡುಬಿದ್ರಿ ಸಿ.ಎ ಬ್ಯಾಂಕ್ ವತಿಯಿಂದ ಏಳು ದಿನವೂ ವಿಭಿನ್ನ ಸಹಕಾರಿ ಸಪ್ತಾಹ ಕಾರ್ಯಕ್ರಮ :vishwanews24
ಪೇಜಾವರ ಶ್ರೀ ಅಭಿನಂದನೆ: ವಿವಾದಕ್ಕೆ ಕಾರಣವಾಗಿದ್ದ ಸುತ್ತೋಲೆಯನ್ನು ವಾಪಾಸು ಪಡೆಯುವ ಭರವಸೆ ನೀಡಿರುವ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ನಿರ್ಧಾರವನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…