ಉಡುಪಿ : ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆಗೆ ಅವಕಾಶವಿಲ್ಲ ಎಂಬ ಆದೇಶವನ್ನು ವಾಪಸ್ ಪಡೆಯುವುದಾಗಿ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾಗಿ ಉಡುಪಿ ಶಾಸಕ ಕೆ . ರಘುಪತಿ ಭಟ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸಚಿವೆಯನ್ನು ಭೇಟಿ ಮಾಡಿದ ಶಾಸಕರು, ಮಾಧ್ವ ಸಮುದಾಯದಲ್ಲಿ ಈ ಆದೇಶದ ಬಗ್ಗೆ ವ್ಯಕ್ತ ಗೊಂಡಿರುವ ಆಕ್ರೋಶದ ಬಗ್ಗೆ ಮನವರಿಕೆ ಮಾಡಿದ್ದರು. ಇದು ಮಾಹಿತಿ ಕೊರತೆಯಿಂದ ಆಗಿರುವ ಆದೇಶ.
ಈ ಬಗ್ಗೆ ಸಚಿವರಿಗೆ ಪೂರ್ಣ ಮಾಹಿತಿ ನೀಡಿರುವುದರಿಂದ ಆದೇಶ ವಾಪಾಸು ಪಡೆಯುವ ಭರವಸೆ ನೀಡಿದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದು ಶಾಸಕ ಭಟ್ ಹೇಳಿದ್ದಾರೆ. ಈ ವಿಚಾರ ಸಂಬಂಧ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಶಾಸಕರ ಮೂಲಕ ಮೊಬೈಲ್ ನಲ್ಲಿ ಸಚಿವೆ ಜೊತೆ ಮಾತನಾಡಿದ್ದರು. ಈ ಆದೇಶದಿಂದ ಮಾಧ್ವ ತತ್ವ ಅನುಯಾಯಿಗಳಿಗೆ ಆಗಿರುವ, ನೋವನ್ನು ತಿಳಿಸಿದ್ದರು.
ಪಡುಬಿದ್ರಿ ಸಿ.ಎ ಬ್ಯಾಂಕ್ ವತಿಯಿಂದ ಏಳು ದಿನವೂ ವಿಭಿನ್ನ ಸಹಕಾರಿ ಸಪ್ತಾಹ ಕಾರ್ಯಕ್ರಮ :vishwanews24
ಪೇಜಾವರ ಶ್ರೀ ಅಭಿನಂದನೆ: ವಿವಾದಕ್ಕೆ ಕಾರಣವಾಗಿದ್ದ ಸುತ್ತೋಲೆಯನ್ನು ವಾಪಾಸು ಪಡೆಯುವ ಭರವಸೆ ನೀಡಿರುವ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ನಿರ್ಧಾರವನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…