ಉಡುಪಿ: ಮುದ್ರಾಲೋನ್ ಯೋಜನೆಯಡಿ ಸಾಲ ನೀಡುವುದಾಗಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ.ವರೆಗೆ ವಂಚಿಸಿದ ಘಟನೆ ನಡೆದಿದೆ.
ಸತೀಶ್ ಜೈನ್ ಅವರಿಗೆ ಅಪರಿಚಿತನೊರ್ವ ಮುದ್ರಾ ಲೋನ್ ಸಂಸ್ಥೆಯ ಮ್ಯಾನೇಜರ್ ಎಂದು ಕರೆ ಮಾಡಿ ಮುದ್ರಾ ಲೋನ್ ನೀಡುವುದಾಗಿ ತಿಳಿಸಿದ್ದ. ಲೋನ್ಗೆ ಸಂಬಂಧಿಸಿ ದಾಖಲೆಗಳನ್ನು ಪಡೆದು, ನೋಂದಣಿ ಶುಲ್ಕ 3,200 ರೂ. ಜಮೆ ಮಾಡುವಂತೆ ತಿಳಿಸಿದ್ದ. ಶುಲ್ಕ ಪಾವತಿಸಿದ ಅನಂತರ ಪ್ರೊಸೆಸ್ ಚಾರ್ಜ್, ಇನ್ಸುರೆನ್ಸ್ ಚಾರ್ಜ್, ಎನ್ಒಸಿ, ಆರ್ಬಿಐ ಟ್ಯಾಕ್ಸ್ ಎಂದು ನಂಬಿಸಿ ಹಣ ಕಟ್ಟುವಂತೆ ತಿಳಿಸಿದ್ದ.
ಸತೀಶ್ ಜೈನ್ ಅವರು ನ. 3ರಿಂದ ನ. 11ರ ವರೆಗೆ ಹಂತ-ಹಂತವಾಗಿ ಆರೋಪಿಗಳು ತಿಳಿಸಿದ ವಿವಿಧ ಖಾತೆಗಳಿಗೆ, ಅವರ ಹಾಗೂ ಅವರ ಹೆಂಡತಿಯ ಆಕ್ಯಿಸ್ ಬ್ಯಾಂಕ್ ಕಾರ್ಕಳ ಖಾತೆಯ ಉಳಿತಾಯ ಖಾತೆಯಿಂದ ಇಂಟರ್ನೆಟ್ ಬ್ಯಾಕಿಂಗ್ ಮುಖೇನಾ ಹಂತ ಹಂತವಾಗಿ 2,38,420 ರೂ. ಹಣವನ್ನು ಪಾವತಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…