Featured

ಉಡುಪಿ : ಮುಷ್ಕರ ನಿರತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ  ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ : ಮುಷ್ಕರ ನಿರತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ  ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ರಾಜ್ಯದಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ನೌಕರರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದಿಯಾಗಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಸಾರ್ವಜನಿಕರ ತುರ್ತು ಕಾರ್ಯಗಳಿಗೆ ಸಮಸ್ಯೆ ಉಂಟಾಗುತ್ತಿದ್ದು ರಾಜ್ಯ ಸರ್ಕಾರ ಮುಷ್ಕರ ನಿರತರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ಪಂದಿಸುವಂತೆ ರಾಜ್ಯ ಸರ್ಕಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಗ್ರಾಮ ಮಟ್ಟದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಗ್ರಾಮ ಪಂಚಾಯತ್ ಪಾತ್ರ ಮಹತ್ವದಾಗಿದ್ದು, ಕುಡಿಯುವ ನೀರು, ಚರಂಡಿ, ಸ್ವಚ್ಚತೆ ಸಹಿತ ಮೂಲ ಸೌಕರ್ಯ ಒದಗಿಸುವ ಗ್ರಾಮ ಪಂಚಾಯತ್ ವ್ಯವಸ್ಥೆಯೇ ಈ ಮುಷ್ಕರದಿಂದಾಗಿ ಅಸ್ತವ್ಯಸ್ತವಾಗಿದೆ.

ಧರಣಿ ನಿರತರ ನ್ಯಾಯಯುತ ಬೇಡಿಕೆಗಳಾದ ಕನಿಷ್ಠ ವೇತನ ಶ್ರೇಣಿ ಪರಿಷ್ಕರಣೆ, ನೌಕರರಿಗೆ ಇ ಎಸ್ ಐ, ಪಿ ಎಫ್ ಸೌಲಭ್ಯ,ಗ್ರಾಮ ಪಂಚಾಯತ್ ಸದಸ್ಯರಿಗೆ ಕೇರಳ ರಾಜ್ಯ ಮಾದರಿಯಲ್ಲಿ ಗೌರವ ಧನ ಹೆಚ್ಚಳ ಮೊದಲಾದ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ಪರಿಗಣಿಸಬೇಕು.

ಕಳೆದ ಹಲವು ದಿನಗಳಿಂದ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ನೌಕರರ ಮುಷ್ಕರದಿಂದ ಗ್ರಾಮ ಸ್ವರಾಜ್ಯದ ನೈಜ ಕಲ್ಪನೆಗೆ ಧಕ್ಕೆ ಉಂಟಾಗುತ್ತಿದ್ದು ತಕ್ಷಣ ರಾಜ್ಯ ಸರ್ಕಾರ ಕ್ರಮ ವಹಿಸುವಂತೆ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago