Featured

ಉಡುಪಿ : ಮುಸಲ್ಮಾನ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಬಹಿಷ್ಕಾರ : ಅವಕಾಶ ನೀಡುವಂತೆ  ಪೇಜಾವರ ಶ್ರೀಗಳಿಗೆ ಮನವಿ – Vishwanews24

ಸ್ವಾಮೀಜಿಗಳು ಮಧ್ಯಪ್ರವೇಶಿಸಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ..

ಉಡುಪಿ: ಉಡುಪಿಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಹಾಕಿರುವುದರ ಕುರಿತು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಜಾತ್ರೆಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಲಾಯಿತು.

ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯ ಅಬೂಬಕ್ಕರ್‌ ಆತ್ರಾಡಿ ನೇತೃತ್ವದಲ್ಲಿ ಮುಸ್ಲಿಂ ವ್ಯಾಪಾರಿಗಳು ಬುಧವಾರ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನೀಷೇಧ ಹೇರಿರುವುದದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ತುಂಬಾ ಸಮಸ್ಯೆಯಾಗಿದೆ ಆದ್ದರಿಂದ ಸ್ವಾಮೀಜಿಗಳು ಮಧ್ಯಪ್ರವೇಶಿಸಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ತಮ್ಮನ್ನು ಭೇಟಿ ಮಾಡಿ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ-ಸಾಮರಸ್ಯ ನೆಮ್ಮದಿ ಅವಶ್ಯಕವಾಗಿ ಬೇಕು ಆದರೆ ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ. ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದ್ದು ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜದ ಇಂದು ನೋವಿನಲ್ಲಿದೆ ಎಂದರು.

ಕೇವಲ ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಬದಲಾಗಿ ಇದಕ್ಕೆ ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಇಂದು ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು ಎಂದರು.

ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳ್ಳತನ ಮಾಡಲಾಗಿದೆ ಇಂದು ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇವೆ ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯ ಬೇಡ. ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು, ತಪ್ಪು ಮಾಡಿದವರನ್ನು ಆ ಸಮಾಜ ಶಿಕ್ಷಿಸಲಿ ಮತ್ತು ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago