Featured

ಉಡುಪಿ : ಮುಸಲ್ಮಾನ ವ್ಯಾಪಾರಿಗಳಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ಬಹಿಷ್ಕಾರ : ಅವಕಾಶ ನೀಡುವಂತೆ  ಪೇಜಾವರ ಶ್ರೀಗಳಿಗೆ ಮನವಿ – Vishwanews24

ಸ್ವಾಮೀಜಿಗಳು ಮಧ್ಯಪ್ರವೇಶಿಸಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ..

ಉಡುಪಿ: ಉಡುಪಿಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಹಾಕಿರುವುದರ ಕುರಿತು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಜಾತ್ರೆಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಲಾಯಿತು.

ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯ ಅಬೂಬಕ್ಕರ್‌ ಆತ್ರಾಡಿ ನೇತೃತ್ವದಲ್ಲಿ ಮುಸ್ಲಿಂ ವ್ಯಾಪಾರಿಗಳು ಬುಧವಾರ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನೀಷೇಧ ಹೇರಿರುವುದದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ತುಂಬಾ ಸಮಸ್ಯೆಯಾಗಿದೆ ಆದ್ದರಿಂದ ಸ್ವಾಮೀಜಿಗಳು ಮಧ್ಯಪ್ರವೇಶಿಸಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ತಮ್ಮನ್ನು ಭೇಟಿ ಮಾಡಿ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ-ಸಾಮರಸ್ಯ ನೆಮ್ಮದಿ ಅವಶ್ಯಕವಾಗಿ ಬೇಕು ಆದರೆ ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ. ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದ್ದು ಹಲವು ಅಹಿತಕರ ಘಟನೆಗಳಿಂದ ಹಿಂದೂ ಸಮಾಜದ ಇಂದು ನೋವಿನಲ್ಲಿದೆ ಎಂದರು.

ಕೇವಲ ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಬದಲಾಗಿ ಇದಕ್ಕೆ ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ ಇಂದು ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು ಎಂದರು.

ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳ್ಳತನ ಮಾಡಲಾಗಿದೆ ಇಂದು ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇವೆ ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯ ಬೇಡ. ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು, ತಪ್ಪು ಮಾಡಿದವರನ್ನು ಆ ಸಮಾಜ ಶಿಕ್ಷಿಸಲಿ ಮತ್ತು ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago