ಉಡುಪಿ: ಜಿಲ್ಲೆಯಲ್ಲಿ ಆರಂಭವಾದ ಹಿಜಬ್ ಹೋರಾಟ ಒಂದೊಂದೇ ಘರ್ಷಣೆಗಳಿಗೆ ಕಾರಣವಾಗುತ್ತಿದೆ. ಹಿಂದೂ ಸಂಘಟನೆಗಳು ಜಿದ್ದಿಗೆ ಬಿದ್ದಂತೆ ಮುಸ್ಲಿಮರನ್ನು ಕಾಡಲು ಶುರು ಮಾಡಿದೆ.
ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಫೂಟ್ ವೇರ್ ಅಂಗಡಿಯ ಹೆಸರು ಬದಲಿಸುವಂತೆ ಹಿಂದೂ ಜಾಗರಣಾ ವೇದಿಕೆ ಆಗ್ರಹಿಸಿದೆ. ಸಾಲಿಗ್ರಾಮ ಪಟ್ಟಣದ ಮುಖ್ಯರಸ್ತೆಯಲ್ಲಿ ಹಿಂದೂ ದೇವರ ಹಾಗೂ ಪ್ರಸಿದ್ಧ ಕ್ಷೇತ್ರದ ಹೆಸರನಿಟ್ಟುಕೊಂಡು ವ್ಯವಹರಿಸುತ್ತಿರುವ “ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್” ಹೆಸರು ಬದಲಾಯಿಸುವಂತೆ ಒತ್ತಾಯಿಸಲಾಗಿದೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಹಿಂದೂ ಜಾಗರಣಾ ವೇದಿಕೆ ಮನವಿ ನೀಡಿದೆ.
ಅಂಗಡಿ ಮಾಲೀಕ ಹಿಜಬ್ ಸಂಬಂಧಿಸಿದ ಕೋರ್ಟ್ ತೀರ್ಪು ವಿಚಾರದಲ್ಲಿ ಬಂದ್ ಮಾಡಿದ್ದರು. ಮುಸ್ಲಿಂ ಸಮುದಾಯ ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿದ್ದಾರೆ. ವ್ಯಾವಹಾರಿಕಾ ಅಂಗಡಿಯ ಹೆಸರು ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. ಈ ನಡುವೆ ವ್ಯವಹಾರ ಅಸಹಕಾರ ಮುಂದುವರೆದಿದೆ. ಗ್ರಾಮಿಣ ಪ್ರದೇಶಗಳಿಗೂ ವ್ಯಾಪಾರ ಬಹಿಷ್ಕಾರ ಆವರಿಸಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸದಸ್ಯರು ಜಾತ್ರೆ ನಡೆಯುವಲ್ಲೆಲ್ಲಾ ಕರಪತ್ರ, ಬ್ಯಾನರ್ ಹಾಕಿ ವಹಿವಾಟಿಗೆ ತಡೆಯೊಡ್ಡುತ್ತಿದ್ದಾರೆ. ನಾಯಕರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…