ಉಡುಪಿ : ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದಾರೆ.
60 ವರ್ಷದ ಮಹಿಳೆ ಕಳೆದ 6 ವರ್ಷಗಳಿಂದ ಉರಿ ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದು ಮೂತ್ರನಾಳದ ಸೋಂಕಿಗೆ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಸಮಸ್ಯೆ ಉಲ್ಭಣಗೊಂಡು ಈಚೆಗೆ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿಗೆ ಸರಳ ಸಿ.ಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶವನ್ನು ಆವರಿಸಿಕೊಂಡಿರುವ ದೊಡ್ಡ ಕಲ್ಲು ಪತ್ತೆಯಾಯಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ ಪದ್ಮರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ 11.5 x 7.5 ಸೆಂ.ಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.
ಡಾ.ಅಂಶುಮನ್, ಡಾ.ಕಾಶಿ ವಿಶ್ವನಾಥ್, ಡಾ.ನಿಶಾ, ಡಾ.ವಿವೇಕ್ ಪೈ ಮತ್ತು ಡಾ.ಕೃಷ್ಣ ಅವರನ್ನೊಳಗೊಂಡ ತಂಡ ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಕಲ್ಲನ್ನು ಹೊರತೆಗೆದಿದ್ದು ರೋಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮಹಿಳಾ ರೋಗಿಯಲ್ಲಿ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲು ಪತ್ತೆಯಾಗಿರುವುದು ವಿಶ್ವದಲ್ಲಿ ಇದೇ ಮೊದಲು. ಹಿಂದೆ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ 528 ಗ್ರಾಂ ಮೂತ್ರಕೋಶದ ಕಲ್ಲು ಪತ್ತೆಯಾಗಿತ್ತು ಎಂದು ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡಕ್ಕೆ ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅಭಿನಂದಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…