Featured

ಉಡುಪಿ: ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆದ ಕೆಎಂಸಿ ವೈದ್ಯರು…Vishwanews24

ಉಡುಪಿ: ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆದ ಕೆಎಂಸಿ ವೈದ್ಯರು…

ಉಡುಪಿ : ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿ ದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ ವೈದ್ಯರು ತಿಳಿಸಿದ್ದಾರೆ.

60 ವರ್ಷದ ಮಹಿಳೆ ಕಳೆದ 6 ವರ್ಷಗಳಿಂದ ಉರಿ ಮೂತ್ರ ಸಮಸ್ಯೆಯಿಂದ ಬಳಲುತ್ತಿದ್ದು ಮೂತ್ರನಾಳದ ಸೋಂಕಿಗೆ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಸಮಸ್ಯೆ ಉಲ್ಭಣಗೊಂಡು ಈಚೆಗೆ ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿಗೆ ಸರಳ ಸಿ.ಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶವನ್ನು ಆವರಿಸಿಕೊಂಡಿರುವ ದೊಡ್ಡ ಕಲ್ಲು ಪತ್ತೆಯಾಯಿತು. ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ ಪದ್ಮರಾಜ್ ಹೆಗ್ಡೆ ಮಾರ್ಗದರ್ಶನದಲ್ಲಿ 11.5 x 7.5 ಸೆಂ.ಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.

ಡಾ.ಅಂಶುಮನ್, ಡಾ.ಕಾಶಿ ವಿಶ್ವನಾಥ್, ಡಾ.ನಿಶಾ, ಡಾ.ವಿವೇಕ್ ಪೈ ಮತ್ತು ಡಾ.ಕೃಷ್ಣ ಅವರನ್ನೊಳಗೊಂಡ ತಂಡ ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ಮೂಲಕ ಕಲ್ಲನ್ನು ಹೊರತೆಗೆದಿದ್ದು ರೋಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮಹಿಳಾ ರೋಗಿಯಲ್ಲಿ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲು ಪತ್ತೆಯಾಗಿರುವುದು ವಿಶ್ವದಲ್ಲಿ ಇದೇ ಮೊದಲು. ಹಿಂದೆ ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ 528 ಗ್ರಾಂ ಮೂತ್ರಕೋಶದ ಕಲ್ಲು ಪತ್ತೆಯಾಗಿತ್ತು ಎಂದು ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡಕ್ಕೆ ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಅಭಿನಂದಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago