Featured

ಉಡುಪಿ: ಮೂರು ಬಾರಿ ಶಾಸಕನಾಗಿದ್ದೇನೆ ಯಾವತ್ತೂ ಸೋತಿಲ್ಲ ; ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇನೆ : ರಘುಪತಿ ಭಟ್ – Vishwanews24

ಉಡುಪಿ: ಬ್ರಾಹ್ಮಣ ಎಂಬ ಕಾರಣಕ್ಕೆ ನನಗೆ ಟಿಕೆಟ್ ಕೈತಪ್ಪುವುದಿಲ್ಲ ; ಟಿಕೆಟ್ ಸಿಗುವ ಬಗ್ಗೆ ನನಗೆ ಪೂರ್ಣ ವಿಶ್ವಾಸವಿದೆ : ರಘುಪತಿ ಭಟ್

ಉಡುಪಿ: “ನಾನು ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇನೆ. ಪಕ್ಷದ ನಾಯಕತ್ವ ನನಗೆ ಟಿಕೆಟ್ ನೀಡುತ್ತದೆ ಅನ್ನುವ ವಿಶ್ವಾಸವಿದೆ. ಮೂರು ಬಾರಿ ಶಾಸಕನಾಗಿದ್ದೇನೆ ನಾನು ಯಾವತ್ತೂ ಸೋತಿಲ್ಲ. ಕೇವಲ ಮಾಧ್ಯಮಗಳಲ್ಲಿ ಚರ್ಚೆಯಾಗುವುದು ಬಿಟ್ಟರೆ ಪಕ್ಷದಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ” ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ಹೇಳಿದ್ದಾರೆ.

ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುತ್ತಾ ಎಂಬ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಾಹ್ಮಣ ಎಂಬ ಕಾರಣಕ್ಕೆ ನನಗೆ ಟಿಕೆಟ್ ಕೈತಪ್ಪುವುದಿಲ್ಲ. ನಮ್ಮದು ರಾಷ್ಟ್ರೀಯ ವಿಚಾರಧಾರೆ ಇರುವ ಪಕ್ಷ. ಜಾತಿ ಆಧಾರದ ಮೇಲೆ ಅಭ್ಯರ್ಥಿಯನ್ನು ಪಕ್ಷ ಇತ್ಯರ್ಥ ಮಾಡುವುದಿಲ್ಲ. ಹಿಂದುತ್ವ ಪಾಲಿಸಿಕೊಂಡು ಬಂದ ಪಕ್ಷ. ಬಿಜೆಪಿಯಲ್ಲಿ ನಾನು ಜಾತಿಯ ಅಭ್ಯರ್ಥಿ ಅಲ್ಲ. ಈವರೆಗೆ ನನಗೆ ಬ್ರಾಹ್ಮಣ ಎಂಬ ಕಾರಣಕ್ಕೆ ಟಿಕೆಟ್ ನೀಡಿದ್ದಲ್ಲ ಎಂದರು.

ನಾನು ಈಗ ಹಾಲಿ ಶಾಸಕ. ನಾನು ಬ್ರಾಹ್ಮಣ ಜಾತಿಯಲ್ಲಿದ್ದರೂ ನಮ್ಮ ಕ್ಷೇತ್ರದಲ್ಲಿ ಅನ್ಯ ಸಮುದಾಯದವರೇ ಹೆಚ್ಚಿದ್ದಾರೆ. ಬಿಲ್ಲವ ಬಂಟ ಮೊಗವೀರ ಸಂಖ್ಯೆ ಹೆಚ್ಚಿದೆ. ನನ್ನ ಕ್ಷೇತ್ರದಲ್ಲಿ ಕೇವಲ ಬೆರಳೆಣಿಕೆಯ ಬ್ರಾಹ್ಮಣರು ಇದ್ದಾರೆ. ನಾನು ಒಳ್ಳೆ ಕಾರ್ಯಕರ್ತ ಎಂಬ ಕಾರಣಕ್ಕೆ ನನಗೆ ಇವರಿಗೆ ಸೀಟ್ ನೀಡಿದ್ದಾರೆ. ಕುಂದಾಪುರದಲ್ಲಿ ಬದಲಾವಣೆ ಮಾಡುವುದಾದರೆ, ಅಲ್ಲಿ ಬ್ರಾಹ್ಮಣ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಆಲೋಚನೆ ಮಾಡಬೇಕು. ನನ್ನನ್ನು ಬದಲಾವಣೆ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುವುದಿಲ್ಲ ವಿಶ್ವಾಸವಿದೆ ಎಂದಿದ್ದಾರೆ.

ಇನ್ನು ನಮ್ಮ ಜಿಲ್ಲೆಯಲ್ಲಿ ಯಾರು ಜಾತಿ ನೋಡುವುದಿಲ್ಲ. ಇಬ್ಬರು ಬ್ರಾಹ್ಮಣ ಅಭ್ಯರ್ಥಿಗಳಿಗೆ ನೀಡಿದರೆ ಯಾರು ಆಕ್ಷೇಪಿಸುವುದಿಲ್ಲ. ಟಿಕೆಟ್ ಕೊಟ್ಟರೆ ನಾನು ಬ್ರಾಹ್ಮಣ ಎಂಬ ಕಾರಣಕ್ಕೆ ಯಾರು ಆಕ್ಷೇಪಿಸುವುದಿಲ್ಲ. ಒಳ್ಳೆಯ ಕಾರ್ಯಕರ್ತನಿಗೆ ಒಳ್ಳೆಯ ಕೆಲಸಗಾರನಿಗೆ ಅವಕಾಶ ನೀಡುವುದೇ ಪ್ರಯೋಗ. ಬಿಜೆಪಿ ಒಟ್ಟಾರೆ ಪ್ರಯೋಗ ಮಾಡುವುದಿಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡಿದವನನ್ನು ಬಿಜೆಪಿ ಬೆಂಬಲಿಸುತ್ತೆ. ನನಗೆ ಸಮಸ್ಯೆ ಬರುವುದಿಲ್ಲ ಅನ್ನೋ ಪೂರ್ತಿ ವಿಶ್ವಾಸ ಇದೆ. ನಾನು ಆಶಾವಾದಿ, ಒಮ್ಮೆಯು ಸೋಲದ ಹಾಲಿ ಶಾಸಕ. ಟಿಕೆಟ್ ಸಿಗುವ ಬಗ್ಗೆ ನನಗೆ ಪೂರ್ಣವಿಶ್ವಾಸವಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago